More

    ಮಹಿಳೆಯ ಕೈಕಾಲು ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದರೋಡೆ

    ವೇಣೂರು: ಒಂಟಿ ಮಹಿಳೆಯ ಮನೆಗೆ ಶನಿವಾರ ಸಾಯಂಕಾಲ ನುಗ್ಗಿದ ನಾಲ್ವರು ಮುಸುಕುಧಾರಿಗಳು ಮಹಿಳೆಯ ಕೈಕಾಲು ಕಟ್ಟಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

    ಬೆಳ್ತಂಗಡಿ ತಾಲೂಕಿನ ನಾರಾವಿ ಸಮೀಪದ ಅರಸಿಕಟ್ಟೆಯ ಪ್ರಭಾವತಿ ನಾಯ್ಕ(67) ಮನೆಯಲ್ಲಿ ಈ ದರೋಡೆ ಪ್ರಕರಣ ನಡೆದಿದೆ. ಪ್ರಭಾವತಿ ನಾಯ್ಕರ ಮನೆಗೆ ಏಕಾಏಕಿ ಒಳನುಗ್ಗಿದ ಮುಸುಕುಧಾರಿಗಳು ಅವರ ಬಾಯಿಗೆ ಬಟ್ಟೆ ತುರುಕಿ ಹಗ್ಗದಿಂದ ಕೈಕಾಲನ್ನು ಕಟ್ಟಿ ಹಾಕಿ ಕುತ್ತಿಗೆಯಲ್ಲಿದ್ದ ಚಿನ್ನದ ಸರ, ಕಿವಿಯಲ್ಲಿದ್ದ ಬೆಂಡೋಲೆಯನ್ನು ಬಲಾತ್ಕಾರವಾಗಿ ತೆಗೆಸಿ ಬಳಿಕ ಮನೆಯೊಳಗಿದ್ದ 3 ಚಿನ್ನದ ಬಳೆಗಳು, 3 ಚಿನ್ನದ ಉಂಗುರಗಳು, ಚಿನ್ನದ ಚೈನ್ ಹಾಗೂ ಒಂದು ಮೊಬೈಲ್‌ನ್ನು ದೋಚಿದ್ದಾರೆ. ‘ಎಂಕ್ಲು ಬತ್ತಿನಾ ಕೆಲಸ ಆಂಡ್’ ಎಂದು ತುಳುವಿನಲ್ಲಿ ಹೇಳುತ್ತಲೇ ದರೋಡೆಕೋರರು ಪರಾರಿಯಾಗಿದ್ದಾರೆ. ಆರೋಪಿಗಳು ದೋಚಿದ ಚಿನ್ನದ ಅಂದಾಜು ಮೌಲ್ಯ 4.60 ಲಕ್ಷ ರೂ. ಆಗಬಹುದೆಂದು ಅಂದಾಜಿಸಲಾಗಿದೆ. ವೇಣೂರು ಠಾಣೆ ಪೊಲೀಸ್ ಉಪನಿರೀಕ್ಷಕಿ ಸೌಮ್ಯಾ ಜೆ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts