ಚಿತ್ರದುರ್ಗ: ನಗರದ ಮೆದೇಹಳ್ಳಿ ರಸ್ತೆ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಆವರಣದಲ್ಲಿ ಜ.14 ರಂದು ಸಂಜೆ 5.30 ಕ್ಕೆ 23 ನೇ ವರ್ಷದ ಲಕ್ಷ ದೀಪೋತ್ಸವ ಏರ್ಪಡಿಸಲಾಗುತ್ತದೆ.
ಈ ಸಂದರ್ಭದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಗೆ ಬಂಗಾರದ ಆಭರಣಗಳ ಅಲಂಕಾರ ಮಾ ಡಲಾಗುವುದು. ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಉದ್ಘಾಟಿಸಲಿದ್ದಾರೆ. ವಿಶ್ವ ಹಿಂದು ಪರಿಷತ್ ಪ್ರಾಂತ ಸಂಘಟನಾ ಕಾರ್ಯದರ್ಶಿ ಜಿ. ಬಸವರಾಜ ದೀಪೋತ್ಸವವನ್ನು ಉದ್ಘಾಟಿಸುವರು. ದೇವಾಲಯ ಸಮಿತಿ ಅಧ್ಯಕ್ಷ ಶರಣ್ಕುಮಾರ್ ಅಧ್ಯಕ್ಷತೆ ವಹಿಸುವರು.
ಮರ್ಚೆಂಟ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಎಸ್.ಆರ್. ಲಕ್ಷ್ಮೀಕಾಂತ್ ರೆಡ್ಡಿ ಮತ್ತಿತರ ಗಣ್ಯರು ಉಪಸ್ಥಿತರಿರುವರು. ಜ.13 ರಂದು ಸಂಜೆ 5.30 ಕ್ಕೆ ನಗರದ ಆನೆ ಬಾಗಿಲು ಬಳಿ ಶ್ರೀ ಗಣಪತಿ ದೇವಾಲಯದಿಂದ ಮೆದೇಹಳ್ಳಿ ರಸ್ತೆ ಮೂಲಕ ಅಯ್ಯಪ್ಪ ಸ್ವಾಮಿ ದೇವಾಲಯದವರೆಗೆ ಬಂಗಾರದ ಆಭರಣಗಳ ಮೆರವಣಿಗೆ ನಡೆಯಲಿದೆ.