ಬೆಳಗಾವಿ: ನಾನು ಗೋಕಾಕ್ ಅನ್ನು ಮುಂದಿನ ಚುನಾವಣೆಯಲ್ಲಿ ಟಾರ್ಗೆಟ್ ಮಾಡುತ್ತೇನೆ. ಪಕ್ಷ ಬಯಸಿದ್ರೆ ಗೋಕಾಕ್ನಲ್ಲಿ ನಾನೇ ಅಭ್ಯರ್ಥಿ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ಸಚಿವ ರಮೇಶ್ ಜಾರಕಿಹೊಳಿ ಟಾರ್ಗೆಟ್ ಮಾಡಿರುವ ವಿಚಾರ ಕುರಿತು ನಗರದಲ್ಲಿ ಶುಕ್ರವಾರ ಸುದ್ದಿಗಾರೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ನನಗೆ ಉತ್ತರ ಕೊಡಲು ಜಾಸ್ತಿ ಹೊತ್ತು ಬೇಕಿಲ್ಲ. 2023ರಲ್ಲಿ ರಮೇಶ್ ಜಾರಕಿಹೊಳಿಗೆ ಜನರಿಂದಲೇ ಉತ್ತರ ಕೊಡಿಸಲು ಕಾಯುತ್ತಿದ್ದೇನೆ ಎಂದು ಎಚ್ಚರಿಸಿದರು. ಇದನ್ನೂ ಓದಿರಿ Video| ಬಿಜೆಪಿ ಮುಖಂಡನ ಬರ್ತ್ ಡೇ ಪಾರ್ಟಿಯಲ್ಲಿ ಜನರತ್ತ ಕಂತೆಕಂತೆ ಹಣ ಚೆಲ್ಲಿದ್ರು! ಈ ದೃಶ್ಯ ನೋಡಿದ್ರೆ ಸಿಟ್ಟಿಗೇಳ್ತೀರಿ
ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನ ಹಣಿಯಲು ಮತ್ತು ಬೆಳಗಾವಿಯಲ್ಲಿ ಮತ್ತಷ್ಟು ಹಿಡಿತ ಸಾಧಿಸುವ ಯೋಜನೆಯೊಂದಿಗೆ ಸಚಿವ ರಮೇಶ್ ಜಾರಕಿಹೊಳಿ ಗ್ರಾಮೀಣ ಕ್ಷೇತ್ರದಲ್ಲಿ ಇತ್ತೀಚಿಗೆ ಲಂಚ್ ಪಾಲಿಟಿಕ್ಸ್ ಮೊರೆ ಹೋಗಿದ್ದರು. ಗ್ರಾಪಂ ಕ್ಷೇತ್ರದಲ್ಲಿ ಗೆದ್ದವರಿಗೆ ಸನ್ಮಾನವೂ ನಡೆದಿತ್ತು.
ಈ ಕುರಿತು ಗರಂ ಆದ ಲಕ್ಷ್ಮೀ ಹೆಬ್ಬಾಳ್ಕರ್, ನಮ್ಮ ಸರ್ಕಾರವನ್ನೇ ಬೀಳಿಸಿದವರಿಗೆ ಗ್ರಾಪಂ ಯಾವ ಲೆಕ್ಕ? ಎಂಎಲ್ಎ ಗಳನ್ನೇ ಎಸ್ಕೇಪ್ ಮಾಡಿದರು. ಅಂತಹವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ? ಕಾಲಾಯ ತಸ್ಮೈ ನಮಃ ನಾನು ಗೋಕಾಕ್ ಅನ್ನು ಮುಂದಿನ ಚುನಾವಣೆಯಲ್ಲಿ ಟಾರ್ಗೆಟ್ ಮಾಡುತ್ತೇನೆ ಎಂದರು. ಇದನ್ನೂ ಓದಿರಿ ಬಂಧನ ವಾರಂಟ್ ಜಾರಿಯಾಗುತ್ತಿದ್ದಂತೆ ಕೋರ್ಟ್ಗೆ ದೌಡಾಯಿಸಿದ ನಟಿ ಪದ್ಮಜಾ ರಾವ್
ಲಕ್ಷ್ಮೀ ಹೆಬ್ಬಾಳ್ಕರ್ರ ಈ ಹೇಳಿಕೆ ಬೆನ್ನಲ್ಲೇ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಮೇಶ ಜಾರಕಿಹೊಳಿ, ಗೋಕಾಕ್ನಿಂದ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪರ್ಧೆ ಮಾಡೋದಾದ್ರೆ ಮೋಸ್ಟ್ ವೆಲ್ ಕಮ್. ಬರಲಿ ಬಹಳ ಸಂತೋಷ. ಪ್ರಜಾಪ್ರಭುತ್ವ ಎಲ್ಲರಿಗೂ ಹಕ್ಕು ಕೊಟ್ಟಿದೆ ಎಂದರು.
ನಾನು ಜಿಲ್ಲಾ ಉಸ್ತುವಾರಿ ಸಚಿವ. ಎಲ್ಲರ ಹಿತ ಕಾಪಾಡುವುದು ನನ್ನ ಕೆಲಸ, ನನ್ನ ಕರ್ತವ್ಯ. ಜನರೇ ಹೆಬ್ಬಾಳ್ಕರ್ಗೆ ಉತ್ತರ ನೀಡ್ತಾರೆ ಎಂದರು. ಇನ್ನು ಸಮ್ಮಿಶ್ರ ಸರ್ಕಾರ ಹೇಗೆ ಬಿತ್ತು? ಏಕೆ ಹೈಜಾಕ್ ಆಯ್ತು? ಅನ್ನೊದರ ಬಗ್ಗೆ ಅವರ ಗಾಡ್ ಫಾದರ್ ಅನ್ನೇ ಲಕ್ಷ್ಮೀ ಹೆಬ್ಬಾಳ್ಕರ್ ಕೇಳಬೇಕು ಎಂದರು.
ಬೇಡ ಬೇಡ ಅಂದ್ರೂ ಸಾವಿನ ಮನೆಯ ಕದ ತಟ್ಟಿದ 15ರ ಬಾಲಕ! ಕಳೆದ ವಾರವೇ ಪೊಲೀಸರು ಎಚ್ಚರಿಸಿದ್ದರು
ತಹಸೀಲ್ದಾರ್ ಕಚೇರಿ ಬಳಿ ಹಾವಿನ ಜತೆ ಆಟವಾಡುತ್ತಿದ್ದ ವೃದ್ಧ ಕ್ಷಣಾರ್ಧದಲ್ಲೇ ಪ್ರಾಣಬಿಟ್ಟ!
ಬಂಧನ ವಾರಂಟ್ ಜಾರಿಯಾಗುತ್ತಿದ್ದಂತೆ ಕೋರ್ಟ್ಗೆ ದೌಡಾಯಿಸಿದ ನಟಿ ಪದ್ಮಜಾ ರಾವ್