More

    ಲಾಲೂ ಪ್ರಸಾದ್​ ಯಾದವ್​ ಮುಖ ಊದಿದೆ, ಶ್ವಾಸಕೋಶದಲ್ಲಿ ನೀರು ತುಂಬಿದೆ! ದೆಹಲಿಯ ಏಮ್ಸ್​ಗೆ ಶಿಫ್ಟ್​ ಸಾಧ್ಯತೆ

    ರಾಂಚಿ: ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಅಧ್ಯಕ್ಷ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಅವರ ಆರೋಗ್ಯ ಸಾಕಷ್ಟು ಗಂಭೀರವಾಗಿದೆ. ಶುಕ್ರವಾರದಂದು ಅವರನ್ನು ರಾಂಚಿಯ ರಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ಆರೋಗ್ಯ ಸಮಸ್ಯೆಗಳು ಕಂಡುಬಂದಿರುವುದಾಗಿ ತಿಳಿಸಲಾಗಿದೆ. ಇಂದು ಅಥವಾ ನಾಳೆ ಅವರನ್ನು ದೆಹಲಿಯ ಏಮ್ಸ್​ ಆಸ್ಪತ್ರೆಗೆ ಸ್ಥಳಾಂತರಿಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

    ಇದನ್ನೂ ಓದಿ: ಮೃತ ವ್ಯಕ್ತಿಯ ವೀರ್ಯದ ಹಕ್ಕು ಪತ್ನಿಗೆ ಮಾತ್ರ: ತಂದೆಯ ಅರ್ಜಿ ತಿರಸ್ಕರಿಸಿದ ನ್ಯಾಯಾಲಯ!

    ಬಹು ಕೋಟಿ ರೂಪಾಯಿ ಮೇವು ಹಗರಣ ಪ್ರಕರಣದಲ್ಲಿ ಜೈಲು ವಾಸ ಅನುಭವಿಸುತ್ತಿರುವ ಲಾಲೂ ಪ್ರಸಾದ್​ ಹಲವು ತಿಂಗಳಿಂದ ಅನಾರೋಗ್ಯ ಪೀಡಿತರಾಗಿದ್ದಾರೆ. ಶ್ವಾಸಕೋಶಲ್ಲಿ ಅಲರ್ಜಿ ಉಂಟಾಗಿರುವುದಾಗಿ ಈ ಹಿಂದೆ ತಿಳಿಸಲಾಗಿತ್ತು. ಅದೇ ಸಮಸ್ಯೆ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ರಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಪತ್ನಿ ಮತ್ತು ಮಕ್ಕಳು ಆಸ್ಪತ್ರೆಗೆ ದೌಡಾಯಿಸಿದ್ದರು.

    ಅಪ್ಪನ ಆರೋಗ್ಯದ ಕುರಿತಾಗಿ ತೇಜಸ್ವಿ ಯಾದವ್​ ಮಾಹಿತಿ ನೀಡಿದ್ದಾರೆ. ಅಪ್ಪನ ಆರೋಗ್ಯ ಹದಗೆಟ್ಟಿದೆ. ಅವರ ಶ್ವಾಸಕೋಶದಲ್ಲಿ ನೀರು ತುಂಬಿಕೊಂಡಿದೆ. ಮುಖ ಊದಿದೆ. ಅವರನ್ನು ದೆಹಲಿಯ ಏಮ್ಸ್​ಗೆ ಸ್ಥಳಾಂತರಿಸುವ ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ವೈದ್ಯರ ಸಲಹೆಯ ಮೇರೆಗೆ ದೆಹಲಿಗೆ ಸ್ಥಳಾಂತರಿಸುವ ನಿರ್ಧಾರೆ ತೆಗೆದುಕೊಳ್ಳಲಾಗುವುದು. ಅದಕ್ಕೂ ಮೊದಲು ನ್ಯಾಯಾಲಯದಿಂದ ಅನುಮತಿ ಪಡೆಯಬೇಕಿರುವುದಾಗಿ ತಿಳಿಸಲಾಗಿದೆ.

    ಇದನ್ನೂ ಓದಿ: ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಟ್ರಂಪ್​ಗೆ ಕೈ ಕೊಟ್ಟ ಮೆಲನಿಯಾ ಟ್ರಂಪ್​?! 15 ವರ್ಷಗಳ ದಾಂಪತ್ಯ ಅಂತ್ಯ?

    ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ, ಮಾಜಿ ಉಪ ಸಿಎಂ ತೇಜಶ್ವಿ ಯಾದವ್, ಮತ್ತು ಮಾಜಿ ಸಚಿವರಾದ ತೇಜ್ ಪ್ರತಾಪ್ ಯಾದವ್ ಸೇರಿ ಹಲವು ನಾಯಕರು ಲಾಲೂ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಬಂದಿದ್ದಾರೆ. (ಏಜೆನ್ಸೀಸ್​)

    ಲಾಲೂ ಪ್ರಸಾದ್​ ಯಾದವ್​ ಆರೋಗ್ಯ ಇನ್ನಷ್ಟು ಗಂಭೀರ; ಆಸ್ಪತ್ರೆಗೆ ದೌಡಾಯಿಸಿದ ಕುಟುಂಬ

    ಆನೆಗೇ ಬೆಂಕಿ ಇಟ್ಟ ಪಾಪಿಗಳು! ಸುಟ್ಟ ನೋವು ತಾಳಲಾರದೆ ಕೊನೆಯುಸಿರೆಳೆದ ಆನೆ

    ನಾನ್​ವೆಜ್​ ಪ್ರಿಯರಿಗೆ ಶುಭ ಸುದ್ದಿ! 1 ಗಂಟೆಯಲ್ಲಿ ಇಷ್ಟು ತಿಂದರೆ ನಿಮಗೆ ಸಿಗುತ್ತೆ ಬುಲೆಟ್​ ಬೈಕ್​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts