ಭೂ ಕಾಯ್ದೆ ತಿದ್ದುಪಡಿ ರೈತರಿಗೆ ಮಾರಕ

blank

ಬೆಳಗಾವಿ: ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಕೈಬಿಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜೆಡಿಎಸ್ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಎಪಿಎಂಸಿ ತಿದ್ದುಪಡಿ ಕಾಯ್ದೆ, ಕೈಗಾರಿಕೆ ವ್ಯಾಜ್ಯ ಕಾಯ್ದೆ, ಗುತ್ತಿಗೆ ಕಾರ್ಮಿಕರ ನಿಯಂತ್ರಣ ಮತ್ತು ನಿರ್ಮೂಲನೆ ಕಾಯ್ದೆಗಳಿಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸುವುದನ್ನು ಸರ್ಕಾರ ಕೈಬಿಡಬೇಕು. ಕರ್ನಾಟಕ ಭೂ ಸುಧಾರಣೆ ಕಾಯ್ದೆಯಲ್ಲಿ ರೈತರ ಭೂಮಿ ವಶಪಡಿಸಿಕೊಂಡು 7 ವರ್ಷಗಳ ನಂತರ ಪರಭಾರೆ ಮಾಡಲು ಅವಕಾಶ ಮಾಡಿಕೊಡಲಾಗಿದೆ.

ಇದರಿಂದ ಉಳ್ಳವರೇ ಭೂಮಿಯ ಒಡೆಯರಾಗಿ, ಕೃಷಿಕರು ಕಷ್ಟಕ್ಕೆ ಸಿಲುಕುವಂತಾಗುತ್ತದೆ. ಎಪಿಎಂಸಿ ತಿದ್ದುಪಡಿ ಕಾಯ್ದೆ ರೈತರ ಹಿತಕ್ಕೆ ಮಾರಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜೆಡಿಎಸ್ ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ, ಭೀಮಪ್ಪ ಗಡಾದ, ಅಶೋಕ ಪೂಜಾರಿ, ಸುಭಾಷ ಪೂಜಾರಿ, ಪ್ರಮೋದ ಪಾಟೀಲ, ಚನ್ನಪ್ಪ ವಗ್ಗನವರ, ಇಬ್ರಾಹಿಂ ಕಿತ್ತೂರು, ಈರಣ್ಣ ಕಮ್ಮಾರ, ಮಲ್ಲು ಅರಬಾವಿ ಇತರರು ಇದ್ದರು.

Share This Article

ಈ ಅಭ್ಯಾಸಗಳಿಂದ ನೀವು ಶ್ವಾಸಕೋಶ ಕ್ಯಾನ್ಸರ್​ಗೆ​ ತುತ್ತಾಗಬಹುದು ಎಚ್ಚರ! ತಡೆಗಟ್ಟದ್ದಿದ್ರೆ ಸಾವು ಕಟ್ಟಿಟ್ಟಬುತ್ತಿ | Lung Cancer

Lung Cancer: ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ಕಾಯಿಲೆಗೆ ತುತ್ತಾದವರ ಸಂಖ್ಯೆ ಗಣನೀಯವಾಗಿ ಏರಿಕೆ ಆಗುತ್ತಿದೆ. ವಯಸ್ಸಿನ…

ಪೂರ್ವಾಭಿಮುಖವಾಗಿ ಕುಳಿತು ಪೂಜೆ ಮಾಡುವುದೇಕೆ?; ಇಲ್ಲಿದೆ ಈ ಮಾತಿನ ಹಿಂದಿನ ಅಸಲಿ ಕಾರಣ | Health Tips

ಪೂಜೆ ಮಾಡುವಾಗ ಹೇಗೆ ನಿಯಮಗಳು ಮತ್ತು ನಿಬಂಧನೆಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಲಾಗುತ್ತದೆಯೋ ಅದೇ ರೀತಿಯಲ್ಲಿ ದಿಕ್ಕನ್ನು ಸಹ ಮನಸ್ಸಿನಲ್ಲಿಟ್ಟುಕೊಳ್ಳುವುದು…

ಊಟದ ಬಳಿಕ ಹೊಟ್ಟೆಯು ಬಲೂನ್‌ನಂತೆ ಊದಿಕೊಳ್ಳುತ್ತದೆಯೇ?; ಸಮಸ್ಯೆಗೆ ಇಲ್ಲಿದೆ ಪರಿಹಾರ | Health Tips

ಇತ್ತೀಚೆಗೆ ಜೀವನಶೈಲಿ ಮತ್ತು ಊಟದಿಂದಾಗಿ ಗ್ಯಾಸ್​​ ಸಮಸ್ಯೆಯು ತುಂಬಾ ಸಾಮಾನ್ಯವಾಗಿದೆ. ಇದು ಅನೇಕ ಕಾರಣಗಳಿಂದ ಉಂಟಾಗಬಹುದು.…