More

    ಶಾಸಕರ ದೌರ್ಜನ್ಯ ಸಹಿಸಲಾಗ್ತಿಲ್ಲ.. ದಯಾಮರಣ ಕೊಡಿ ಎಂದು ಸಿಎಂ ಪುತ್ರನ ಬಳಿ ಕಣ್ಣೀರಿಟ್ಟ ಮಹಿಳೆಯರು

    ಚಿಕ್ಕಮಗಳೂರು: ನಾಯ್ಯಕ್ಕಾಗಿ ಸಿಎಂ ಬಿ.ಎಸ್​. ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರರ ಮುಂದೆ ಮಹಿಳೆಯರು ಕಣ್ಣೀರಿಟ್ಟ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ.

    ಖಾಸಗಿ ಕಾರ್ಯಕ್ರಮ ನಿಮಿತ್ತ ಚಿಕ್ಕಮಗಳೂರು ನಗರಕ್ಕೆ ವಿಜಯೇಂದ್ರ ಆಗಮಿಸಿದ್ದರು. ಈ ವೇಳೆ ಅವರ ಕಾರಿನ ಬಳಿ ಬಂದ ಪ್ರಸನ್ನ ಎಂಬುವರ ಕುಟುಂಬಸ್ಥರು, ತರೀಕೆರೆ ಶಾಸಕ ಸುರೇಶ್ ನಮ್ಮ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ. ಪೊಲೀಸ್ ಠಾಣೆಗೆ ದೂರು ನೀಡಿದರೆ ನ್ಯಾಯ ಸಿಗುತ್ತಿಲ್ಲ. ನಮಗೆ ನ್ಯಾಯ ಕೊಡಿ ಇಲ್ಲವೇ, ದಯಾಮರಣ ಕೊಡಿ ಎಂದು ಕುಟುಂಬಸ್ಥರು ಕೈಮುಗಿದು ಬೇಡಿಕೊಂಡರು.

    ಚಿಕ್ಕಮಗಳೂರು ಮೂಲದ ಪ್ರಸನ್ನ ಕುಟುಂಬ ತರೀಕೆರೆಯ ಲಕ್ಕವಳ್ಳಿಯಲ್ಲಿ 7 ವರ್ಷದ ಹಿಂದೆ 50 ಎಕರೆ ಜಮೀನು ಖರೀದಿ ಮಾಡಿತ್ತು. ಈ ಸಂಬಂಧ ತರೀಕೆರೆ ಶಾಸಕ ಸುರೇಶ್ ದೌರ್ಜನ್ಯ ನಡೆಸುತ್ತಿದ್ದಾರೆ. ಪ್ರಕರಣ ನ್ಯಾಯಾಲಯ ದಲ್ಲಿದ್ದರೂ ಶಾಸಕರು ಹಿಂಬಾಲಕರ ಮೂಲಕ ಹಲ್ಲೆ ನಡೆಸುತ್ತಿದ್ದಾರೆ. ನಮಗೆ ರಕ್ಷಣೆ ನಿಡಿ. ಸೂಕ್ತ ನ್ಯಾಯ ಕೊಡಿಸಿ ಎಂದು ಪಸನ್ನ ಕುಟುಂಬದ ಮಹಿಳೆಯರು ಕಣ್ಣೀರು ಹಾಕುತ್ತ ಪರಿಪರಿಯಾಗಿ ಬೇಡಿಕೊಂಡರು.

    ಇದಕ್ಕುತ್ತರಿಸಿದ ವಿಜಯೇಂದ್ರ, ಭಯಪಡಬೇಡಿ. ನಾನು ಅವರೊಂದಿಗೆ ಮಾತನಾಡುವೆ. ಧೈರ್ಯವಾಗಿರಿ ಎಂದು ಭರವಸೆ ನೀಡಿದರು.

    ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುಷ್ಕರ್ಮಿಗಳು! ಕರುಗೆ ಹಾಲುಣಿಸಲಾಗದೆ ನರಳುತ್ತಿದೆ ಮೂಕಜೀವಿ

    ನೇಣುಬಿಗಿದ ಸ್ಥಿತಿಯಲ್ಲಿ ತಾಯಿ-ಮಗನ ಶವ ಪತ್ತೆ! ಶಿವರಾತ್ರಿ ಸಡಗರಕ್ಕೆ ಕೊಳ್ಳಿ ಇಟ್ಟ ಸಾವು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts