ಕೊಪ್ಪ: ಲ್ಯಾಪ್ಟ್ಯಾಪ್ ವಿತರಣೆಯಲ್ಲಿನ ತಾರತಮ್ಯ ಖಂಡಿಸಿ ದ್ವಿತೀಯ, ತೃತೀಯ ವರ್ಷದ ವಿದ್ಯಾರ್ಥಿಗಳು ಶಾಸಕರನ್ನು ತಡೆದು ಪ್ರತಿಭಟನೆ ನಡೆಸಿದರು.
ಶನಿವಾರ ಬಾಳಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತ ಲ್ಯಾಪ್ಟ್ಯಾಪ್ ವಿತರಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಇದಕ್ಕೆ ಆಗಮಿಸಿದ ಶಾಸಕರನ್ನು ಕಾಲೇಜು ಗೇಟ್ ಸಮೀಪ ತಡೆದ ದ್ವಿತೀಯ, ತೃತೀಯ ವರ್ಷದ ವಿದ್ಯಾರ್ಥಿಗಳು ಲ್ಯಾಪ್ಟ್ಯಾಪ್ ವಿತರಣೆಯಲ್ಲಿ ತಾರತಮ್ಯ ಮಾಡುತ್ತಿರುವುದನ್ನು ಖಂಡಿಸಿ ಎಲ್ಲ ವಿದ್ಯಾರ್ಥಿಗಳಿಗೂ ಲ್ಯಾಪ್ಟ್ಯಾಪ್ ವಿತರಿಸಬೇಕು. ಇಲ್ಲವಾದಲ್ಲಿ ಕಾರ್ಯಕ್ರಮ ನಡೆಸಲು ಬಿಡುವುದಿಲ್ಲ ಎಂದು ಪಟ್ಟುಹಿಡಿದರು. ಶಾಸಕರು ವಿದ್ಯಾರ್ಥಿಗಳನ್ನು ಸಮಾಧಾನಪಡಿಸಲು ಯತ್ನಿಸಿದರೂ ವಿದ್ಯಾರ್ಥಿಗಳು ಪಟ್ಟು ಬಿಡದೆ ಶಾಸಕರು, ಸರ್ಕಾರದ ವಿರುದ್ಧ ಘೊಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ನಡುವೆ ಶಾಸಕರು ಸಾಂಕೇತಿಕವಾಗಿ ಲ್ಯಾಪ್ಟ್ಯಾಪ್ ವಿತರಿಸಿ ಮಾತನಾಡಿ, ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಎಸ್ಸಿ, ಎಸ್ಟಿ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ಟ್ಯಾಪ್ ವಿತರಿಸಲಾಗುತ್ತಿತ್ತು. ಹೊಸ ಸರ್ಕಾರ ಅದೇ ಕಾರ್ಯಕ್ರಮವನ್ನು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಲ್ಯಾಪ್ಟ್ಯಾಪ್ ನೀಡಲು ಮುಂದಾಗಿದೆ. ಈಗಾಗಲೇ ಎಲ್ಲ ವಿದ್ಯಾರ್ಥಿಗಳಿಗೆ ಲ್ಯಾಪ್ಟ್ಯಾಪ್ ನೀಡಬೇಕು ಎಂದು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲಾಗಿದೆ. ವಿಧಾನಸಭೆ ಅಧಿವೇಶನದಲ್ಲಿ ಲ್ಯಾಪ್ಟ್ಯಾಪ್ ವಿತರಣೆ ಬಗ್ಗೆ ರ್ಚಚಿಸಿ ಎಲ್ಲ ವಿದ್ಯಾರ್ಥಿಗಳಿಗೂ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.
ಪ್ರಾಚಾರ್ಯ ಅನಂತ್, ಉಪನ್ಯಾಸ ಉದಯ್ಕುಮಾರ್, ವೆಂಕಟೇಶ್, ಪಪಂ ಸದಸ್ಯರಾದ ರಶೀದ್, ವಿಜಯ್ಕುಮಾರ್ ಇದ್ದರು.