ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಅಡಿ ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಮೇ 10ರ ವರೆಗೆ ಶಿಕ್ಷಣ ಇಲಾಖೆಯು ವಿಸ್ತರಿಸಿದೆ.
ಅರ್ಜಿ ಸಲ್ಲಿಸಲು ಏ.20 ಕೊನೆಯ ದಿನವಾಗಿತ್ತು. ಪಾಲಕರ ಒತ್ತಾಯದ ಮೇರೆಗೆ ಅರ್ಜಿ ಸಲ್ಲಿಕೆ ಸಮಯವನ್ನು ವಿಸ್ತರಿಸಿದೆ. ಮೇ 18ರಂದು ಮೊದಲ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಕಟಿಸಲಿದೆ.
ಇದನ್ನೂ ಓದಿ: ‘ನೀವೇ ನಿಜವಾದ ಸಚಿನ್ ಅಂತ ಏನು ಗ್ಯಾರಂಟಿ?’ ಎಂದಿದ್ದಕ್ಕೆ ತೆಂಡುಲ್ಕರ್ ಕೊಟ್ಟ ವೆರಿಫಿಕೇಷನ್ ಇದು!
ಮೇ 19ರಿಂದ ದಾಖಲಾತಿ ಆರಂಭವಾಗಲಿದೆ. ಎರಡನೇ ಹಂತದ ಸೀಟು ಹಂಚಿಕೆಯ ಫಲಿತಾಂಶವನ್ನು ಜೂ.6ರಂದು ಪ್ರಕಟಿಸಲಿದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್ಸೈಟ್ https://schooleducation.kar.nic.in/ ನೋಡಬಹುದು.
ಗೂಂಡಾ ಕಾಯ್ದೆಯಡಿ ಬಂಧಿತ ಆಪ್ತನ ಮನೆಗೆ ಮಾಜಿ ಸಿಎಂ ಜಗದೀಶ ಶೆಟ್ಟರ್ ಭೇಟಿ!