ದೇವನಹಳ್ಳಿ: ಹೊಸಹಳ್ಳಿ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ಗೆ ಸಿನಿಮೀಯ ರೀತಿಯಲ್ಲಿ ನುಗ್ಗಿದ ದರೋಡೆಕೋರರು ಮೂರೂವರೆ ಕೋಟಿ ಮೌಲ್ಯದ ಸುಮಾರು 5 ಕೆಜಿ ಚಿನ್ನಾಭರಣ ದೋಚಿದ್ದಾರೆ.
ಶನಿವಾರ ಬ್ಯಾಂಕ್ಗೆ ರಜೆ ಇದ್ದ ಕಾರಣ ಭಾನುವಾರ ಬೆಳಗ್ಗೆ ಈ ಪ್ರಕರಣ ಬೆಳಕಿಗೆ ಬಂದಿದೆ. ಮುಖಕ್ಕೆ ಮಂಕಿ ಕ್ಯಾಪ್ ಹಾಕಿಕೊಂಡು ತಡರಾತ್ರಿ ಬಂದ ದರೋಡೆಕೋರರು ಗ್ಯಾಸ್ ಕಟರ್ ಬಳಸಿ ಬ್ಯಾಂಕ್ನಲ್ಲಿ ಚಿನ್ನಾಭರಣ ಮತ್ತು 14 ಲಕ್ಷ ನಗದು ದೋಚಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹೆಣ್ಣು ಮಗುವಿಗೆ ಬಾಲ! 2 ಇಂಚು ಉದ್ದದ ಬಾಲದೊಂದಿಗೆ ಜನಿಸಿದ ಕಂದಮ್ಮ, ಮೆಕ್ಸಿಕೋದಲ್ಲಿ ಅಪರೂಪದ ಪ್ರಕರಣ