ಸಿರಗುಪ್ಪ: ಪ್ರತಿ ಹಬ್ಬವೂ ಸೌಹರ್ದದ ಪ್ರತೀಕ. ಹೀಗಾಗಿ ತಾಲೂಕಿನಲ್ಲಿ ಮೊಹರಂ ಅನ್ನು ಎಲ್ಲರೂ ಶಾಂತಿಯುತ, ಸಂಭ್ರಮದಿಂದ ಆಚರಿಸಬೇಕು ಎಂದು ಡಿವೈಎಸ್ಪಿ ವೆಂಕಟೇಶ್ ತಿಳಿಸಿದರು.
ನಗರದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಶಾಂತಿಸಭೆಯಲ್ಲಿ ಮಾತನಾಡಿದರು. ಹಬ್ಬವನ್ನು ಕಲ್ಯಾಣ ಕರ್ನಾಟಕ ಭಾಗದಲ್ಲಿ ಗ್ರಾಮಾಂತರ ಪ್ರದೇಶದಲ್ಲಿ ಹಿಂದು-ಮುಸ್ಲಿಮರು ಭಾವೈಕ್ಯದಿಂದ ಆಚರಿಸುತ್ತಾರೆ. ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ತಾಲೂಕಿನ ಕೆಲ ಗ್ರಾಮಗಳಲ್ಲಿ ಮೊಹರಂ ಆಚರಣೆ ನಿಷೇಧ ಮಾಡಲಾಗಿದೆ.
ಇದನ್ನೂ ಓದಿ:https://www.vijayavani.net/%
ಎಲ್ಲ ಧರ್ಮಗಳಿಗಿಂತ ಮಿಗಿಲಾದದು ಮಾನವ ಧರ್ಮ. ಅದಕ್ಕೆ ಧಕ್ಕೆಯಾಗುವಂತಹ ಆಚರಣೆಗೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದರು. ಸಿಪಿಐ ಯಶವಂತ್ ಬಿಸ್ನಳ್ಳಿ, ಅಪರಾಧ ವಿಭಾಗದ ಪಿಎಸ್ಐ ವೀರನಗೌಡ, ಎಎಸ್ಐಗಳಾದ ಶ್ರೀನಿವಾಸ್, ವೆಂಕಟರಮಣ ಮತ್ತು ವಿವಿಧ ಗ್ರಾಮಗಳ ಮುಖಂಡರು ಇದ್ದರು.