ಆನೇಕಲ್: ಸ್ನೇಹಿತರೊಂದಿಗೆ ಪಾರ್ಟಿ ಮಾಡಿ ಕಾರಿನಲ್ಲಿ ಬರುವಾಗ ಅಪಘಾತಕ್ಕೀಡಾದರೂ ಪವಾಡ ಸದೃಶ ಪಾರದ ಕಾನೂನು ವಿದ್ಯಾರ್ಥಿ ಮನೆಗೆ ಬಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದಲ್ಲಿ ಸಂಭವಿಸಿದೆ.
ಅಲೈನ್ಸ್ ಕಾಲೇಜಿನ ವಿದ್ಯಾರ್ಥಿ ಕೌಶಿಕ್(20) ಮೃತ. ಕಾಲೇಜು ರಜಾ ಇರುವುದರಿಂದ ಸಮೀಪದ ಈಡನ್ ಗಾರ್ಡನ್ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ. ಕಳೆದ ರಾತ್ರಿ ಸ್ನೇಹಿತನ ಜೊತೆ ಹೋಗಿ ‘ಎಣ್ಣೆ’ ಪಾರ್ಟಿ ಮಾಡಿದ್ದ. ಬಳಿಕ ಹೊಸೂರಿನಿಂದ ವಾಪಸ್ ಮನೆಗೆ ಬರುವ ಮಾರ್ಗಮಧ್ಯೆ ಹೊಸೂರು ರಸ್ತೆಯ ಗುಡ್ಡನಹಳ್ಳಿಯಲ್ಲಿ ಕಾರು ಸ್ಕಿಡ್ ಆಗಿ ಪಲ್ಟಿ ಹೊಡೆದಿತ್ತು. ಪ್ರಾಣಾಪಾಯದಿಂದ ಕೌಶಿಕ್ ಪಾರಾದರೂ ಗಾಯಗೊಂಡಿದ್ದ. ಸ್ಥಳೀಯರು ಕೌಶಿಕ್ನನ್ನು ಆಸ್ಪತ್ರೆಗೆ ಆಟೋದಲ್ಲಿ ಕಳುಹಿಸಿದ್ದರು. ಆದರೆ ಆತ ಆಸ್ಪತ್ರೆಗೆ ಹೋಗದೆ ಮನೆಗೆ ಹೋಗಿದ್ದ.
ಇದನ್ನೂ ಓದಿರಿ ‘ಜಮೀರ್ ಅಹ್ಮದ್ ಬೆಂಗಳೂರು ಗಲಭೆಯ ಡೈರೆಕ್ಟರ್, ಪ್ರೊಡ್ಯೂಸರ್…’
ಆಸ್ಪತ್ರೆಗೆ ಹೋಗದೆ ಮನೆ ಹೋದ ಕೌಶಿಕ್ ಮತ್ತು ಆತನ ಸ್ನೇಹಿತ ಮನೆಯ ಮೊದಲ ಮಹಡಿಯಲ್ಲಿ ಬೀಗ ಒಡೆದು ಒಳಗೆ ಹೋಗಿದ್ದರು. ಮನೆ ಒಳಗೆ ಹೋದನಂತರ ಸ್ನೇಹಿತನನ್ನು ರೂಮಿನಲ್ಲಿ ಕೂಡಿ ಹಾಕಿದ ಕೌಶಿಕ್, ಫ್ಯಾನಿಗೆ ನೇಣು ಬಿಗಿದುಕೊಂಡಿದ್ದಾನೆ. ರೂಮಿನಲ್ಲಿದ್ದ ಸ್ನೇಹಿತನ ಕೂಗಾಟ ಕೇಳಿದ ಸ್ಥಳೀಯರು ಬಂದು ನೋಡಿದ್ದಾರೆ. ಅಷ್ಟರಲ್ಲಿ ಕೌಶಿಕ್ ಮೃತಪಟ್ಟಿದ್ದ. ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದುಬಂದಿಲ್ಲ.
ಕಾಂಗ್ರೆಸ್ ವಿರುದ್ಧ ಅಖಂಡ ಶ್ರೀನಿವಾಸ್ ಮೂರ್ತಿ ಆಕ್ರೋಶ… ಸುಟ್ಟಿರೋದು ನನ್ನ ಮನೆ, ಡಿಕೆಶಿಯದ್ದಲ್ಲ!