ವಿಜಯನಗರ: ಹಾಡಹಗಲೇ ಕೋರ್ಟ್ ಆವರಣದಲ್ಲಿ ವಕೀಲರೊಬ್ಬರನ್ನು ಯುವಕನೊಬ್ಬ ಭೀಕರವಾಗಿ ಕೊಂದಿರುವ ದುರ್ಘಟನೆ ಶನಿವಾರ ಬೆಳಗ್ಗೆ ಜಿಲ್ಲೆಯಲ್ಲಿ ಸಂಭವಿಸಿದೆ.
ವಕೀಲ ಡಾ.ತಾರಿಹಳ್ಳಿ ವೆಂಕಟೇಶ್ ಕೊಲೆಯಾದವರು. ಕೋರ್ಟ್ ಆವರಣದಲ್ಲೇ ಡಾ.ತಾರಿಹಳ್ಳಿ ವೆಂಕಟೇಶ್ ಅವರನ್ನ ಮನೋಜ್ ಎಂಬ ಯುವಕ ಮಚ್ಚಿನಿಂದ ಕೊಚ್ಚಿಹಾಕಿದ್ದಾನೆ. ಗಂಭೀರ ಗಾಯಗೊಂಡು ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ವಕೀಲ ಮೃತಪಟ್ಟಿದ್ದಾರೆ. ಇದನ್ನೂ ಓದಿರಿ ಪ್ರೊ.ಭಗವಾನ್ ಮುಖಕ್ಕೆ ಮಸಿ ಬಳಿದಿದ್ದ ವಕೀಲೆ ಮೀರಾಗೆ ಸಂಕಷ್ಟ!
ಡಾ.ತಾರಿಹಳ್ಳಿ ವೆಂಕಟೇಶ್ ವಕೀಲ ಮಾತ್ರವಲ್ಲ ಕಾಂಗ್ರೆಸ್ ಮುಖಂಡರೂ ಆಗಿದ್ದರು. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಆರೋಪಿ ಮನೋಜ್ನನ್ನು ಪೊಲೀಸರು ಬಂಧಿಸಿದ್ದಾರೆ.
ಕಾನೂನಿನ ಸುವ್ಯವಸ್ಥೆ ಕಾಪಾಡುತ್ತಿದ್ದ ನ್ಯಾಯಾಲಯದ ಆವರಣದಲ್ಲೇ ಕರ್ತವ್ಯನಿರತ ವಕೀಲನನ್ನ ಮಾರಕಾಸ್ತ್ರದಿಂದ ಕೊಲೆ ಮಾಡಿದ್ದನ್ನ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್ಬುಕ್ ಪೇಜ್ ಲೈಕ್ ಮಾಡಿ
ಪತ್ನಿ ಸತ್ತ 3 ತಿಂಗಳಿಗೆ ಮತ್ತೊಂದು ಮದ್ವೆ ಆದವ ಮಗುವಿನ ಜತೆ ಸಾವಿನ ಮನೆಯ ಕದ ತಟ್ಟಿದ್ದೇಕೆ?
ನೀವು ಶಾಸಕರಾದ್ರೆ ನಮಗೇನ್ರಿ? ಸುಮ್ಮನೆ ಹಣ ಕಟ್ಟಿ… ಶಾಸಕನಿಗೆ ಟೋಲ್ ಸಿಬ್ಬಂದಿ ಧಮ್ಕಿ!