ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಯಾವುದಾದರೂ ಒಂದು ವಿಚಾರದ ಕುರಿತು ಮಾತನಾಡುತ್ತಲೇ ಜನರ ಗಮನ ಸೆಳೆದಿರುವ, ವಕೀಲ್ ಸಾಬ್ ಎಂದು ಕರೆಸಿಕೊಳ್ಳುತ್ತಿರುವ ಲಾಯರ್ ಕೆ.ಎನ್. ಜಗದೀಶ್ ಆಮ್ ಆದ್ಮಿ ಪಕ್ಷಕ್ಕೆ ಸೇರಲಿದ್ದಾರೆ.
ವಿಶೇಷವಾಗಿ ಮಾಜಿ ಸಚಿವರೊಬ್ಬರೊಂದಿಗಿನ ಯುವತಿಯ ಅಶ್ಲೀಲ ವಿಡಿಯೋ ವಿಚಾರವಾಗಿ, ಯುವತಿ ಪರವಾಗಿ ಮಾತನಾಡುತ್ತ ಗಮನ ಸೆಳೆದಿದ್ದ ಜಗದೀಶ್, ಅಧಿಕೃತವಾಗಿ ರಾಜಕೀಯ ಪಕ್ಷಕ್ಕೆ ಸೇರುತ್ತಿದ್ದಾರೆ. ಆ ಮೂಲಕ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಳ್ಳಲು ಮುಂದಾಗಿದ್ದಾರೆ.
ಅಕ್ಟೋಬರ್ 11ರ ಸೋಮವಾರದಂದು ಮಧ್ಯಾಹ್ನ 1.00 ಗಂಟೆಗೆ ಬೆಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಜಗದೀಶ್ ಮಹಾದೇವ್ ಅವರನ್ನು ಆಮ್ ಆದ್ಮಿ ಪಾರ್ಟಿಗೆ ಬರಮಾಡಿಕೊಳ್ಳಲಾಗುತ್ತದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ತಿಳಿಸಿದ್ದಾರೆ.
ಮತಾಂತರವಾಗಿದ್ದವರ ಘರ್ ವಾಪಸಿ; ಶಾಸಕ ಗೂಳಿಹಟ್ಟಿ ಶೇಖರ್ ನೇತೃತ್ವದಲ್ಲಿ ಶಿಲುಬೆ ತೆಗೆದಿಟ್ಟು ಕಂಕಣ ಕಟ್ಟಿಕೊಂಡು ವಾಪಸ್