ಬೆಳಗಾವಿ: ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಚುನಾವಣಾ ಚಟುವಟಿಕೆ ಬಿರುಸುಗೊಂಡಿದೆ. ರಾಜ್ಯದ 224 ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ಭರ್ಜರಿಯಾಗಿ ನಡೆದಿದೆ. ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆಯಾದ ಬಳಿಕ ಬಂಡಾಯದ ಬಿಸಿ ಎಲ್ಲ ಪಕ್ಷಗಳಿಗೂ ತಟ್ಟಿದೆ. ಅದರಲ್ಲೂ ಬಿಜೆಪಿ ಮತ್ತು ಕಾಂಗ್ರೆಸ್ ಪಾಳಯದಲ್ಲಿ ಪಕ್ಷಾಂತರ ಪರ್ವ ಜೋರಾಗಿದೆ. ಗಮನಾರ್ಹ ಸಂಗತಿಯೆಂದರೆ, ಬೆಳಗಾವಿ ರಾಜಕಾರಣ ಸದ್ಯದ ಸ್ಥಿತಿಯಲ್ಲಿ ರಾಜ್ಯದ ಗಮನ ಸೆಳೆದಿದೆ.
ಬಿಜೆಪಿಯಿಂದ ಟಿಕೆಟ್ ಮಿಸ್ ಆದ ಬೆನ್ನಲ್ಲೇ ಬಿಜೆಪಿ ನಾಯಕರು ಕಾಂಗ್ರೆಸ್ ಕಡೆ ಮುಖ ಮಾಡಿದ್ದಾರೆ. ಈಗಾಗಲೇ ಲಕ್ಷ್ಮಣ್ ಸವದಿ ಬಿಜೆಪಿಯಿಂದ ದೈಹಿಕ ಹಾಗೂ ಮಾನಸಿಕವಾಗಿ ದೂರವಾಗಿದ್ದು, ಇಂದು ಕಾಂಗ್ರೆಸ್ ಸೇರುವ ಸಾಧ್ಯತೆ ಹೆಚ್ಚಿದೆ. ಅದಕ್ಕೆ ಪುಷ್ಠಿ ನೀಡುವಂತೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರನ ಜೊತೆ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬುಕ್ ಮಾಡಿದ್ದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ. ಅಲ್ಲದೆ, ಡಿ.ಕೆ. ಶಿವಕುಮಾರ್ ಜತೆ ಕಾರಿನಲ್ಲಿ ಒಟ್ಟಿಗೆ ಆಗಮಿಸುವ ಮೂಲಕ ಕಾಂಗ್ರೆಸ್ ಸೇರುವುದು ಖಚಿತ ಎಂಬ ಸಂದೇಶವನ್ನು ಸವದಿ ಅವರು ಬಿಜೆಪಿಗೆ ನೇರವಾಗಿ ರವಾನಿಸಿದ್ದಾರೆ.
ಇದನ್ನೂ ಓದಿ: ಮಹಿಳೆಯರ ಖಾಸಗಿ ಅಂಗಗಳ ಬಗ್ಗೆ ಮಾತಾಡಿದ್ರೆ ಗುಂಡು ಹಾರಿಸುತ್ತೇನೆಂದ ನಟಿ ರಾಧಿಕಾ ಆಪ್ಟೆ!
ಇಂದು ಮಾಜಿ ಸಿಎಂ ಸಿದ್ದು ನಿವಾಸದಲ್ಲಿ ಸಭೆ ನಡೆದಿದ್ದು, ಲಕ್ಷ್ಮಣ್ ಸವದಿ ಸಭೆಯಲ್ಲಿ ಭಾಗವಹಿಸಿದ್ದರು. ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚೆ ನಡೆಯುತ್ತಿದ್ದು, ಷರತ್ತುಗಳ ಬಗ್ಗೆ ಚರ್ಚಿಸಿದ ಬಳಿಕ ಎಲ್ಲವನ್ನು ಹೇಳುತ್ತೇನೆ ಎಂದು ಸವದಿ ಹೇಳಿದ್ದಾರೆ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಸಮ್ಮುಖದಲ್ಲಿ ಸವದಿ ಕಾಂಗ್ರೆಸ್ ಸೇರ್ಪಡೆ ಕುರಿತು ಚರ್ಚೆ ನಡೆಸಿದ್ದಾರೆ. ಸವದಿ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತವಾಗಿದೆ.
ಸವದಿ ಮಾತ್ರವಲ್ಲ ಮತ್ತೊಬ್ಬ ಶಾಸಕ ಅನಿಲ್ ಬೆನಕೆ ಕೂಡ ಕಾಂಗ್ರೆಸ್ ಕದ ತಟ್ಟುವ ಸಾಧ್ಯತೆ ದಟ್ಟವಾಗಿದೆ. ಮಾಜಿ ಕಾಂಗ್ರೆಸ್ ಶಾಸಕ ಫಿರೋಜ್ ಶೇಠ್ ಜತೆ ಅನಿಲ್ ಬೆನಕೆ ಕಾಣಿಸಿಕೊಂಡಿದ್ದಾರೆ. ಒಟ್ಟಿಗೆ ಹೆಗಲ ಮೇಲೆ ಕೈ ಹಾಕಿಕೊಂಡು ಉಭಯ ನಾಯಕರು ಕ್ಯಾಮರಾಗೆ ಪೋಸ್ ನೀಡಿದ್ದಾರೆ. ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಬೆನಕೆ ಅಸಮಾಧಾನಗೊಂಡಿದ್ದಾರೆ. ಹೀಗಾಗಿ ಬೆನಕೆ ಅವರ ನಡೆ ತೀವ್ರ ಕುತೂಹಲ ಮೂಡಿಸಿದೆ. ಬೆನಕೆ ಕಾಂಗ್ರೆಸ್ ಸೇರ್ಪಡೆ ವದಂತಿ ನಡೆಯೇ ಒಟ್ಟಿಗೆ ಕಾಣಿಸಿಕೊಂಡಿರುವುದು ಕಾಂಗ್ರೆಸ್ ಸೇರ್ಪಡೆ ವದಂತಿ ನಿಜವಾಗುತ್ತಾ ಸಾಗಿದೆ.
ಲಕ್ಷ್ಮಣ್ ಸವದಿ ಕಾಂಗ್ರೆಸ್ ಸೇರ್ಪಡೆ ಫಿಕ್ಸ್: ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರನ ಜತೆ ಬೆಂಗಳೂರಿಗೆ ಆಗಮನ
ವರುಣಾದಲ್ಲಿ ಸೋಮಣ್ಣರಿಗೆ ನೂರೆಂಟು ಸವಾಲು! ಬಿ.ಎಸ್. ಯಡಿಯೂರಪ್ಪರ ಮೇಲೆ ಸದ್ಯದ ಕುತೂಹಲ