ಸಿದ್ದರಾಮಯ್ಯ ಸರ್ಕಾರಕ್ಕೆ ಧಿಕ್ಕಾರ ಕೂಗಿದ ಪಂಚಮಸಾಲಿ ಸಮಾಜದ ಮುಖಂಡರು

mlp 12-1 protest

ಮಹಾಲಿಂಗಪುರ: ಬೆಳಗಾವಿ ಸುವರ್ಣ ಸೌಧದ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಪಂಚಮಸಾಲಿ ಮುಖಂಡರ ಮೇಲೆ ಲಾಠಿ ಚಾರ್ಜ್ ಮಾಡಿದ ಘಟನೆ ಖಂಡಿಸಿ ಪಟ್ಟಣದ ರಾಣಿ ಚನ್ನಮ್ಮ ವೃತ್ತದಲ್ಲಿ ಪಂಚಮಸಾಲಿ ಸಮಾಜದವರು ರಸ್ತೆತಡೆ ನಡೆಸಿ ಗುರುವಾರ ಪ್ರತಿಭಟನೆ ನಡೆಸಿದರು.

ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಧರೆಪ್ಪ ಸಾಂಗಲೀಕರ ಮಾತನಾಡಿ, ಹೋರಾಟ ಹತ್ತಿಕ್ಕಲು ಸರ್ಕಾರ ಪ್ರಯತ್ನಿಸುತ್ತಿದೆ. ಎಷ್ಟೇ ಕುತಂತ್ರ ಮಾಡಿದರೂ ನಾವು ಹೋರಾಟ ಕೈಬಿಡುವುದಿಲ್ಲ ಎಂದು ಎಚ್ಚರಿಸಿದರು. ಪ್ರತಿಭಟನಾಕಾರರು ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ವಿರುದ್ಧ ಘೋಷಣೆ ಕೂಗಿದರು.

ಪಂಚಮಸಾಲಿ ಸಮಾಜದ ನಗರ ಘಟಕದ ಅಧ್ಯಕ್ಷ ಬಸವರಾಜ ಕೊಪ್ಪದ, ಮುಖಂಡರಾದ ಶ್ರೀಶೈಲಪ್ಪ ಉಳ್ಳಾಗಡ್ಡಿ, ಶ್ರೀಶೈಲ ವಜ್ರಮಟ್ಟಿ, ಹನುಮಂತ ಶಿರೋಳ, ಸಿದ್ದುಗೌಡ ಪಾಟೀಲ, ಚನ್ನಪ್ಪ ಪಟ್ಟಣಶೆಟ್ಟಿ, ಪರಪ್ಪ ಹುದ್ದಾರ, ಬಸವರಾಜ ನಾಗನೂರ, ಚನಬಸು ಯರಗಟ್ಟಿ, ಬಸಪ್ಪ ಬ್ಯಾಳಿ, ಶಿವಲಿಂಗ ಕೌಜಲಗಿ, ಬಸವರಾಜ ದಲಾಲ, ಮಹಾಲಿಂಗಪ್ಪ ಕಂಠಿ, ಮಹಾದೇವ ಮೇಟಿ, ಆನಂದ ಖೇತಗೌಡ, ಚನಬಸು ಹುರಕಡ್ಲಿ, ಮಂಜು ಮುತ್ತಪ್ಪಗೋಳ, ವಿನೋದ ಉಳ್ಳಾಗಡ್ಡಿ, ಪಂಡೀತ್ ಪೂಜೇರಿ, ಪಂಡೀತ್ ಖೋತ, ಮಲ್ಲಪ್ಪ ಉರಬಿನವರ, ಮಲ್ಲಪ್ಪ ಹುದ್ದಾರ, ಚನ್ನಪ್ಪ ಶಿವಾಪೂರ, ಸಂಗಮೇಶ ನಾಡಗೌಡ, ಲಕ್ಷ್ಮಣ ಪಟ್ಟಣಶೆಟ್ಟಿ, ಮಹಾಂತೇಶ ಮೇಟಿ, ಬಸವಲಿಂಗಪ್ಪ ಯಡಹಳ್ಳಿ ಪಾಲ್ಗೊಂಡಿದ್ದರು.

ರಬಕವಿ-ಬನಹಟ್ಟಿ ಸಿಪಿಐ ಸಂಜೀವ ಬಳೇಗಾರ, ಪಿಎಸ್‌ಐಗಳಾದ ಕಿರಣ ಸತ್ತಿಗೇರಿ, ಮಧು ಬೀಳಗಿ ಹಾಗೂ ಪೊಲೀಸ್ ಸಿಬ್ಬಂದಿ ಪ್ರತಿಭಟನೆ ವೇಳೆ ಸೂಕ್ತ ಬಂದೋಬಸ್ತ್ ಮಾಡಿದ್ದರು.

Share This Article

ಕಡಿಮೆ ಸಮಯದಲ್ಲಿ ಮನೆಯಲ್ಲೇ ಮಾಡಿ ರುಚಿಕರ ಆಲೂಪೂರಿ; ಇಲ್ಲಿದೆ ಸುಲಭ ವಿಧಾನ | Recipe

ದಿನ ನಿತ್ಯ ಒಂದೇ ರೀತಿಯ ಬೆಳಗ್ಗಿನ ತಿಂಡಿ ತಿಂದು ಬೇಸರವಾಗಿರುತ್ತದೆ. ಆದರೆ ಏನಾದರೂ ವಿಶೇಷವಾದ ಬ್ರೇಕ್​ಫಾಸ್ಟ್​…

ಉಗುರಿನಲ್ಲಿ ಅಡಗಿದೆ ನಿಮ್ಮ ಆರೋಗ್ಯದ ರಹಸ್ಯ; ಹೇಗೆ ಅಂತೀರಾ.. ಈ ಮಾಹಿತಿ ನೋಡಿ | Health Tips

ಒಬ್ಬ ವ್ಯಕ್ತಿಯನ್ನು ನೋಡುವ ಮೂಲಕ ಅವನ ಬಗ್ಗೆ ಬಹಳಷ್ಟು ಹೇಳಬಹುದು. ಆದರೆ ಉಗುರುಗಳು ನಿಮ್ಮ ಆರೋಗ್ಯದ…

ಬೆಟ್ಟದ ನೆಲ್ಲಿಕಾಯಿ- ಅಲೋವೆರಾ ಕೂದಲಿನ ಆರೈಕೆಗೆ ಯಾವುದು ಬೆಸ್ಟ್​​; ಇಲ್ಲಿದೆ ಹೆಲ್ತಿ ಮಾಹಿತಿ | Health Tips

ಹುಡುಗನಾಗಲಿ ಅಥವಾ ಹುಡುಗಿಯಾಗಲಿ ಇಬ್ಬರಿಗೂ ತಮ್ಮ ಕೂದಲಿನ ಬಗ್ಗೆ ಹೆಚ್ಚು ಕಾಳಜಿ ಇರುತ್ತದೆ. ಪ್ರಸಕ್ತ ಜೀವನಶೈಲಿ,…