More

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

    ಕೆ.ಎಂ.ದೊಡ್ಡಿ: ಸಮೀಪದ ಕಾಡುಕೊತ್ತನಹಳ್ಳಿ ಗ್ರಾಮದ ಬಿಜೆಪಿ ಮುಖಂಡ, ಗ್ರಾಪಂ ಮಾಜಿ ಅಧ್ಯಕ್ಷ ದಯಾನಂದ ಹಾಗೂ ಬೆಂಬಲಿಗರು ಶಾಸಕ ಕದಲೂರು ಉದಯ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು.

    ಶಾಸಕ ಕದಲೂರು ಉದಯ್ ಮಾತನಾಡಿ, ಕಾಂಗ್ರೆಸ್ ಜನಪರ ಕಾರ್ಯಕ್ರಮಗಳು ಹಾಗೂ ಕ್ಷೇತ್ರದಲ್ಲಿನ ನನ್ನ ಕಾರ್ಯಗಳನ್ನು ಮನಗಂಡು ಜೆಡಿಎಸ್ ಹಾಗೂ ಬಿಜೆಪಿಯ ಹಲವು ಮುಖಂಡರು, ಕಾರ್ಯಕರ್ತರು ಪಕ್ಷಕ್ಕೆ ಸೇರ್ಪಡೆಗೊಳ್ಳುವ ಮೂಲಕ ಕಾಂಗ್ರೆಸ್‌ಗೆ ಹೆಚ್ಚಿನ ಶಕ್ತಿ ತುಂಬುತ್ತಿದ್ದಾರೆ ಎಂದರು.
    ಕಾಂಗ್ರೆಸ್‌ನಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸರ್ಕಾರದ ಜನಪರ ಯೋಜನೆಗಳನ್ನು ಗ್ರಾಮ ಮಟ್ಟದಲ್ಲಿ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಹಾಗೂ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರು ಅವರನ್ನು ಹೆಚ್ಚಿನ ಮತಗಳಲ್ಲಿ ಗೆಲ್ಲಿಸುವ ನಿಟ್ಟಿನಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಹಗಲಿರುಳು ಶ್ರಮಿಸಬೇಕು ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಜಿಪಂ ಮಾಜಿ ಅಧ್ಯಕ್ಷ ಬಿ.ಬಸವರಾಜು, ತಾಪಂ ಮಾಜಿ ಸದಸ್ಯರಾದ ಕಪನಿಗೌಡ, ಕೆಂಪರಾಜು, ಭಾರತಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಟ್ಟನಹಳ್ಳಿ ಶಿವಲಿಂಗೇಗೌಡ, ಕಾಡುಕೊತ್ತನಹಳ್ಳಿ ಗ್ರಾಪಂ ಅಧ್ಯಕ್ಷ ವೀರಭದ್ರು, ಉದ್ಯಮಿ ಮಾದೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts