ಕಾಲು ಜಾರಿ ಬಿದ್ದ ಸಿದ್ದರಾಮಯ್ಯ; ಅಪಘಾತದಲ್ಲಿ ಗಾಯಗೊಂಡಿದ್ದವರ ಭೇಟಿಗೆ ಬಂದಿದ್ದಾಗ ಘಟನೆ..
ಬಾಗಲಕೋಟೆ: ಸಿದ್ದರಾಮೋತ್ಸವಕ್ಕೆ ಆಗಮಿಸುತ್ತಿದ್ದಾಗ ಅಪಘಾತಕ್ಕೀಡಾಗಿ ಗಾಯಗೊಂಡಿದ್ದವರನ್ನು ಭೇಟಿಯಾಗಲು ಬಂದಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಕಾಲು ಜಾರಿ ಕುಸಿದು ಬಿದ್ದ ಘಟನೆ ನಡೆದಿದೆ. ಬಾಗಲಕೋಟೆ ನಗರದ ಖಾಸಗಿ ಆಸ್ಪತ್ರೆ ಮುಂದೆ ಈ ಘಟನೆ ನಡೆದಿದೆ. ಆಗಸ್ಟ್ 2ರಂದು ಸಿದ್ದರಾಮೋತ್ಸವಕ್ಕೆ ಹೊರಟ ವಾಹನ ಅಪಘಾತಕ್ಕೀಡಾಗಿ ಗಾಯಗೊಂಡಿದ್ದವರ ಯೋಗಕ್ಷೇಮ ವಿಚಾರಿಸಲು ಸಿದ್ದರಾಮಯ್ಯ ಆಗಮಿಸಿದ್ದರು. ಸಿದ್ದರಾಮಯ್ಯ ಅವರು ಡ್ರೈವರ್ ಪಕ್ಕದ ಡೋರ್ನಲ್ಲಿ ನಿಂತು ಅಭಿಮಾನಿಗಳತ್ತ ಕೈಬೀಸುವಾಗ ಕಾಲು ಜಾರಿ ಕುಸಿದು ಬಿದ್ದಿದ್ದರು. ಅವರು ಬೀಳುತ್ತಿದ್ದಂತೆ ಅಂಗರಕ್ಷಕರು ಅವರನ್ನು ಹಿಡಿದು ಎಬ್ಬಿಸಿ ಕಾರಲ್ಲಿ ಕೂರಿಸಿದರು. … Continue reading ಕಾಲು ಜಾರಿ ಬಿದ್ದ ಸಿದ್ದರಾಮಯ್ಯ; ಅಪಘಾತದಲ್ಲಿ ಗಾಯಗೊಂಡಿದ್ದವರ ಭೇಟಿಗೆ ಬಂದಿದ್ದಾಗ ಘಟನೆ..
Copy and paste this URL into your WordPress site to embed
Copy and paste this code into your site to embed