More

    ನಾಯಿ ಬೇಟೆಯಾಡಿ ಹೊತ್ತೊಯ್ಯುವಾಗ ಲಾರಿ ಡಿಕ್ಕಿಯಾಗಿ ಚಿರತೆ ಸಾವು

    ಕೊಪ್ಪಳ: ಗಂಗಾವತಿ ತಾಲೂಕು ಹೇಮಗುಡ್ಡ ಗ್ರಾಮದ ಸಮೀಪದ ನಾಯಿ ಹೊತ್ತೊಯ್ಯುತ್ತಿದ್ದ ಚಿರತೆ ಲಾರಿ ಡಿಕ್ಕಿಯಾಗಿ ಮೃತಪಟ್ಟಿದೆ.

    ಇದನ್ನೂ ಓದಿ: ಪ್ರೇಯಸಿ ಜತೆ ಪಲ್ಲಂಗದಾಟವಾಡಿ ಲಾಕ್​ಡೌನ್ ವೇಳೆ ಮಾಸ್ಟರ್ ಪ್ಲಾನ್ ಮಾಡಿ ಸಿಕ್ಕಿಬಿದ್ದ ವಂಚಕ

    ಇಂದು ನಸುಕಿನ ವೇಳೆ ನಾಯಿ ಬೇಟೆಯಾಡಿರುವ ಚಿರತೆ ಅದನ್ನು ಹೊತ್ತು ರಸ್ತೆ ದಾಟುವಾಗ ಅಪಘಾತ ನಡೆದಿದೆ. ರಸ್ತೆ ಪಕ್ಕದಲ್ಲಿ ಚಿರತೆ ಒದ್ದಾಡಿ ಮೃತಪಟ್ಟಿದೆ. ಬೆಳಗಿನ ಜಾವ ರಸ್ತೆ ಪಕ್ಕದಲ್ಲಿ ಸತ್ತು ಬಿದ್ದ ಚಿರತೆಯನ್ನು ಕಂಡು ಬೆಚ್ಚಿ ಬಿದ್ದ ಸ್ಥಳೀಯರು ಅರಣ್ಯ ಇಲಾಖೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಇದನ್ನೂ ಓದಿ: ಆನ್​ಲೈನ್​ ಕ್ಲಾಸ್​ ತೆಗೆದುಕೊಂಡಿದ್ದ ಶಿಕ್ಷಕಿ ವಿರುದ್ಧ ಅಸಭ್ಯ ಕಾಮೆಂಟ್: ಜಾಲತಾಣದಲ್ಲಿ ಫೋಟೋ ವೈರಲ್​​

    ಪೊಲೀಸ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಬಂದು ಭೇಟಿ ನೀಡಿದಾಗ ಅಪಘಾತದಿಂದ ಚಿರತೆ ಮೃತಪಟ್ಟಿದೆ ಎಂದು ತಿಳಿಸಿದ್ದಾರೆ. ಹೇಮಗುಡ್ಡದ ಗುಡ್ಡ ಗಾಡು ಪ್ರದೇಶದಲ್ಲಿ ಚಿರತೆಗಳು ಹೆಚ್ಚು ವಾಸವಾಗಿದ್ದು ಗ್ರಾಮದಲ್ಲಿ ಈಗ ಭಯದ ವಾತಾವರಣ ನಿರ್ಮಾಣವಾಗಿದೆ. (ದಿಗ್ವಿಜಯ ನ್ಯೂಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts