ಮೂರು ಚಿರತೆ ಮರಿಗಳನ್ನು ತಾಯಿ ಮಡಿಲು ಸೇರಿಸಿದ ಚಿರತೆ ಕಾರ್ಯಪಡೆ

blank

ಮೈಸೂರು: ತಾಲೂಕಿನ ವರುಣ ಹೋಬಳಿಯ ಭುಗತಗಳ್ಳಿ ಗ್ರಾಮದ ಬಡಾವಣೆಯೊಂದರಲ್ಲಿ ಒಂದು ವಾರದ ಅವಧಿಯಲ್ಲಿ ಮೂರು ಚಿರತೆ ಮರಿ ಹಾಗೂ ಅವುಗಳ ತಾಯಿಯನ್ನು ರಕ್ಷಿಸಲಾಗಿದೆ.

ಭುಗತಗಳ್ಳಿಯ ಖಾಸಗಿ ಬಡಾವಣೆಯಲ್ಲಿ ಚಿರತೆ ಮರಿ ಇರುವ ಮಾಹಿತಿಯ ಮೇರೆಗೆ ಫೆ.7 ರಂದು ಸ್ಥಳಕ್ಕೆ ಭೇಟಿ ನೀಡಿದ ಚಿರತೆ ಕಾರ್ಯಪಡೆ ತಂಡ 2 ಚಿರತೆ ಮರಿಗಳನ್ನು ರಕ್ಷಿಸಿದರು. ನಂತರ ಫೆ.9 ರಂದು ಮತ್ತೊಂದು ಮರಿಯನ್ನು ರಕ್ಷಿಸಲಾಯಿತು. ತಾಯಿ ಚಿರತೆಗೋಸ್ಕರ ಚಿರತೆ ಕಾರ್ಯಪಡೆ ನಿರಂತರ ಕಾರ್ಯಾಚರಣೆ ನಡೆಸಿತು.

6 ದಿನಗಳ ನಿರಂತರ ಕಾರ್ಯಾಚರಣೆಯ ಬಳಿಕ ಗುರುವಾರ ತಾಯಿ ಚಿರತೆಯು ಸೆರೆ ಸಿಕ್ಕಿದೆ. ಒಂದು ವಾರದ ಕಾರ್ಯಾಚರಣೆ ಬಳಿಕ ಮೂರು ಮರಿಗಳು ಹಾಗೂ ತಾಯಿ ಚಿರತೆಯನ್ನು ಒಂದು ಸೇರಿಸುವಲ್ಲಿ ಮಹತ್ವದ ಹೆಜ್ಜೆ ಇರಿಸಲಾಗಿದ್ದು, ತಾಯಿ ಮರಿಗಳ ಆರೋಗ್ಯ ತಪಾಸಣೆ ಹಾಗೂ ಪುನರ್ಮಿಲನ ಪ್ರಕ್ರಿಯೆ ಪ್ರಗತಿಯಲ್ಲಿದೆ.

Share This Article

18 ತಿಂಗಳ ನಂತರ ಸಿಂಹ ರಾಶಿಗೆ ಕೇತು ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…

ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…