ಕ್ರೀಡೆಯೊಂದಿಗೆ ಶಿಕ್ಷಣದ ಕಡೆಗೂ ಮಕ್ಕಳು ಗಮನಹರಿಸಲಿ

blank

ರಾವಂದೂರು: ಪಠ್ಯೇತರ ಚಟುವಟಿಕೆಯೊಂದಿಗೆ ಪಠ್ಯ ಚಟುವಟಿಕೆಯತ್ತ ವಿದ್ಯಾರ್ಥಿಗಳು ಗಮನ ಹರಿಸಬೇಕು ಎಂದು ಕೆಪಿಎಸ್ ಶಾಲೆಗಳ ಉಪಾಧ್ಯಕ್ಷ ಆರ್.ವಿ.ವಿಶ್ವನಾಥ್ ತಿಳಿಸಿದ್ದಾರೆ.

ಚಾಮರಾಜನಗರದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಗ್ರಾಮದ ಕೆಪಿಎಸ್ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಕ್ರೀಡೆಯೊಂದಿಗೆ ವಿದ್ಯಾಭ್ಯಾಸದ ಕಡೆಗೂ ಹೆಚ್ಚು ಗಮನ ಹರಿಸಬೇಕು. ಮುಂಬರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಬೇಕು ಎಂದು ತಿಳಿಸಿದರು.

ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಜಲೇಂದ್ರ, ಸುರೇಶ್, ನದೀಮ್, ತೇಜಸ್ವಿನಿ, ಉಪ ಪ್ರಾಂಶುಪಾಲ ಸುರೇಶ್, ಉಪನ್ಯಾಸಕ ಸುಭಾಷ್ ಚಂದ್ರ, ದೈಹಿಕ ಶಿಕ್ಷಣ ಶಿಕ್ಷಕ ವಿಜಯ್ ಇತರರು ಇದ್ದರು.

 

Share This Article

ಬೇಸಿಗೆಯಲ್ಲಿ ಈ 5 ಪದಾರ್ಥಗಳೊಂದಿಗೆ ಅಪ್ಪಿ ತಪ್ಪಿಯೂ ಮೊಸರು ತಿನ್ನಬೇಡಿ! | Yogurt

Yogurt : ಬೇಸಿಗೆಯಲ್ಲಿ, ಮೊಸರು ದೇಹವನ್ನು ತಂಪಾಗಿಸಲು ಸಹಾಯ ಮಾಡುತ್ತದೆ. ಆದರೆ, ಮೊಸರಿನೊಂದಿಗೆ ಅಥವಾ ಅದರ…

ಬಸ್ಸು ಅಥವಾ ಕಾರಿನಲ್ಲಿ ಪ್ರಯಾಣಿಸುವಾಗ ವಾಂತಿ ಬರೊದೇಕೆ ಗೊತ್ತೆ!; ತಡೆಗಟ್ಟೊದೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ | Vomit

Vomit : ಕೆಲವರಿಗೆ ಬಸ್​ ಮತ್ತು ಕಾರಿನಲ್ಲಿ ಪ್ರಯಾಣ ಮಾಬೇಕಾದರೆ ಸಲ್ಪ ದೂರು ಪ್ರಯಾಣಿಸಿದ ಬಳಿಕ…

ನಕಲಿ vs ಅಸಲಿ ಕಲ್ಲಂಗಡಿ ಹಣ್ಣು: ಪತ್ತೆಹಚ್ಚುವುದು ಹೇಗೆ? ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ… Watermelon

Watermelon : ಎಲ್ಲಡೆ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಡುವ ಬಿಸಿಲಿನಿಂದಾಗಿ…