ಸಮಾಜದಲ್ಲಿ ಪ್ರತಿ ಮಗುವಿಗೂ ಶಿಕ್ಷಣ ಸಿಗಲಿ

blank

ಸಾಲಿಗ್ರಾಮ: ಸಮಾಜದಲ್ಲಿ ಪ್ರತಿ ಮಗುವಿಗೂ ಶಿಕ್ಷಣ ಸಿಗುವಂತೆ ಗ್ರಾಮಗಳಲ್ಲಿ ಸಂಘ-ಸಂಸ್ಥೆಗಳು ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ರಾಜನಹಳ್ಳಿ ವಾಲ್ಮೀಕಿ ಮಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ತಿಳಿಸಿದರು.

ಸಾಲಿಗ್ರಾಮ ತಾಲೂಕು ಮಹರ್ಷಿ ವಾಲ್ಮೀಕಿ ನಾಯಕರ ಸಂಘದಿಂದ ವಾಲ್ಮೀಕಿ ಮಠಕ್ಕೆ ನೀಡಿದ ದೇಣಿಗೆಯನ್ನು ಸ್ವೀಕರಿಸಿ ಮಾತನಾಡಿ, ಯಾವುದೇ ಸಮಾಜದ ಶೋಷಿತರು ಮತ್ತು ನಿರ್ಗತಿಕರು, ಅಸಂಘಟಿತರನ್ನು ಮುಖ್ಯವಾಹಿನಿಗೆ ತರುವ ಕೆಲಸ ವಾಲ್ಮೀಕಿ ಸಂಘಗಳಿಂದ ಆಗಬೇಕು ಎಂದರು.

ಸಾಲಿಗ್ರಾಮ ಮತ್ತು ಕೆ.ಆರ್.ನಗರ ತಾಲೂಕು ವಾಲ್ಮೀಕಿ ನಾಯಕರ ಸಂಘ ಶ್ರೀಮಠದ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸ ನಾನು ಎಂದಿಗೂ ಮರೆಯುವುದಿಲ್ಲ. ಸಾಲಿಗ್ರಾಮ ತಾಲೂಕು ವಾಲ್ಮೀಕಿ ನಾಯಕರ ಸಂಘ ಇತ್ತೀಚಿನ ದಿನಗಳಲ್ಲಿ ಸಂಘಟನೆಯಲ್ಲಿ ಮುಂಚೂಣಿಯಲ್ಲಿದೆ.

ಸಿ.ಸಿ.ಮಹದೇವ್ ಅಧ್ಯಕ್ಷರಾಗಿ ಆಯ್ಕೆಯಾದ ಮೇಲೆ ವಿಶೇಷ ಜನಪರ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ ಸಮಾಜದ ಒಳಿತಿಗೆ ಸಂಘ ಸಹಕರಿಸುತ್ತಿದೆ ಎನ್ನುವುದನ್ನು ಕೇಳಿದ್ದೇನೆ. ರಾಜಕೀಯ ಪಕ್ಷಗಳ ಮುಖಂಡರಿಂದ ಸಮಾಜದ ಅಭಿವೃದ್ಧಿ ಮಾಡಿಸಿ. ಸಹಕರಿಸಿದರೆ ಯಾವುದೇ ಗಣ್ಯರನ್ನು ಮರೆಯಬೇಡಿ. ಆದರೆ ಪದಾಧಿಕಾರಿಗಳು ಮತ್ತು ಸದಸ್ಯರು ಸಂಘದಲ್ಲಿ ಯಾರು ರಾಜಕೀಯ ಮಾಡಬೇಡಿ. ಒಂದೇ ವಾಲ್ಮೀಕಿ ಒಂದೇ ನಾಯಕ ಸಮಾಜ ಎಂದು ಪದಾಧಿಕಾರಿಗಳಿಗೆ ಕಿವಿಮಾತು ಹೇಳಿದರು.

ಸಾಲಿಗ್ರಾಮ ತಾಲೂಕು ನಾಯಕರ ಸಂಘದ ಅಧ್ಯಕ್ಷ ಭೇರ್ಯ ಸಿ.ಸಿ.ಮಹದೇವ್, ಕೆ.ಆರ್.ನಗರ ತಾಲೂಕು ವಾಲ್ಮೀಕಿ ಸಂಘದ ನಿರ್ದೇಶಕ ಹಂಪಾಪುರ ದೇವರಾಜ್, ಸಾಲಿಗ್ರಾಮ ತಾಲೂಕು ಸಂಘದ ಉಪಾಧ್ಯಕ್ಷ ತಂದ್ರೆ ವೆಂಕಟೇಶನಾಯಕ, ಖಜಾಂಚಿ ಹೊಸೂರು ಸಂತೋಷ್, ಸಂಘಟನಾ ಕಾರ್ಯದರ್ಶಿ ಚನ್ನಂಗೆರೆ ಕುಮಾರ್, ಕರ್ಪೂರವಳ್ಳಿ ಶ್ಯಾಮಿಯಾನ ರಮೇಶ್ ಸೇರಿದಂತೆ ಇತರರು ಇದ್ದರು.

Share This Article

18 ತಿಂಗಳ ನಂತರ ಸಿಂಹ ರಾಶಿಗೆ ಕೇತು ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…

ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…