ಅಭಿವೃದ್ಧಿ ಕೆಲಸಕ್ಕೆ ನರೇಗಾ ಬಳಕೆಯಾಗಲಿ

blank

ಗುಂಡ್ಲುಪೇಟೆ: ಗ್ರಾಮಗಳ ಅಭಿವೃದ್ಧಿ ಕಾಮಗಾರಿಗಳಿಗೆ ನರೇಗಾ ಯೋಜನೆ ಬಳಸಿಕೊಳ್ಳಬೇಕು ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.

blank

ಮಂಗಳವಾರ ತಾಲೂಕಿನ ಮಂಚಹಳ್ಳಿ ಗ್ರಾಮದಲ್ಲಿ 24/7 ನೀರು ಸರಬರಾಜು ಯೋಜನೆಯ ಘೋಷಣೆ ನಂತರ ಅವರು ಮಾತನಾಡಿದರು.

ಸದ್ಯ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಬೋರ್ಡ್ ಇಲ್ಲದಿರುವುದರಿಂದ ಎಲ್ಲಾ ಗ್ರಾಮಗಳಲ್ಲಿಯೂ ಅಭಿವೃದ್ಧಿ ಕಾರ್ಯಗಳಿಗೆ ಅನುದಾನದ ಕೊರತೆಯಾಗುತ್ತಿದೆ. ಗ್ರಾಮಾಂತರ ಪ್ರದೇಶಗಳ ಅಭಿವೃದ್ಧಿಗೆ ಶಾಸಕರ ಅನುದಾನ ಒಂದನ್ನೇ ಅವಲಂಬಿಸುವ ಬದಲು ಚರಂಡಿ, ರಸ್ತೆ ನಿರ್ಮಾಣ, ಶಾಲಾ ಕೊಠಡಿ ನಿರ್ಮಾಣ ಮುಂತಾದ ಕೆಲಸ ಕಾರ್ಯಗಳನ್ನು ನರೇಗಾ ಯೋಜನೆಯಲ್ಲಿ ಕೈಗೊಳ್ಳಬೇಕು. ಇದರಿಂದ ಗ್ರಾಮಾಂತರ ಪ್ರದೇಶಗಳ ಕೂಲಿ ಕಾರ್ಮಿಕರಿಗೆ ಅಗತ್ಯ ಉದ್ಯೋಗ ದೊರಕುತ್ತದೆ. ನರೇಗಾ ಯೋಜನೆಯಲ್ಲಿ ವಿಳಂಬವಾಗುತ್ತಿರುವ ಮೆಟೀರಿಯಲ್ ಬಿಲ್‌ಗಳನ್ನು ಸಹ ಶೀಘ್ರವೇ ಪಾವತಿಸಲು ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಇಂಜಿನಿಯರಿಂಗ್ ವಿಭಾಗದ ಇಂಜಿನಿಯರ್‌ಗಳಾದ ಮಧುಸೂದನ್, ಶಿವಮೂರ್ತಿ, ಮುಖಂಡರಾದ ಮಂಚಹಳ್ಳಿ ಲೋಕೇಶ್, ಟಿಎಪಿಸಿಎಂಎಸ್ ಅಧ್ಯಕ್ಷ ಆಲತ್ತೂರು ಜಯರಾಂ, ಆಲತ್ತೂರು ಗ್ರಾಪಂ ಅಧ್ಯಕ್ಷೆ ಮಂಜುಳಾ, ಸದಸ್ಯ ರಾಮಣ್ಣ ಇತರರಿದ್ದರು.

 

Share This Article

ತಂದೆಯಾಗಿ ನಿಮ್ಮ ಮಗನಿಗೆ ಕಲಿಸಲೇ ಬೇಕಾದ ವಿಷಯಗಳಿವು…| Dad

Dad: ಈಗಿನ ದಿನಗಳಲ್ಲಿ ಮಕ್ಕಳನ್ನು ಬೆಳೆಸುವುದು ದೊಡ್ಡ ಸವಾಲಾಗಿದೆ. ತಮ್ಮ ಮಕ್ಕಳಿಗೆ ಶಿಕ್ಷಣ, ಶಿಸ್ತು ಮತ್ತು…

ದೇಹದ ಈ ಭಾಗಗಳ ಮೇಲೆ ಅಪ್ಪಿತಪ್ಪಿಯೂ ಟ್ಯಾಟೂ ಹಾಕಿಸಬೇಡಿ..ಅಪಾಯ ಖಂಡಿತ! Tattoo

Tattoo: ಇತ್ತೀಚಿನ ದಿನಗಳಲ್ಲಿ ಟ್ಯಾಟೂ ಹಾಕಿಸಿಕೊಳ್ಳುವುದು ಫ್ಯಾಷನ್  ಆಗಿದೆ. ಹುಡುಗರಿಂದ ಹಿಡಿದು ಹುಡುಗಿಯರವರೆಗೆ ಎಲ್ಲರೂ ತಮ್ಮ…

ಕಂಕುಳಲ್ಲಿರುವ ಕಪ್ಪು ಕಲೆ ಕಡಿಮೆಯಾಗಲು ಏನು ಮಾಡಬೇಕು? underarms

underarms: ಅನೇಕ ಹುಡುಗಿಯರು ಕಂಕುಳಲ್ಲಿನ ಕಪ್ಪು ಕಲೆಗಳನ್ನು ಹೋಗಲಾಡಿಸಲು  ಅನೇಕ ಪ್ರಯತ್ನ ಮಾಡುತ್ತಾರೆ. ಇದಕ್ಕಾಗಿ ಅವರು…