More

    ಶಾಲೆ, ಕಾಲೇಜುಗಳಲ್ಲಿ ಸಾವಿತ್ರಿ ಬಾಯಿ ಪುಲೆ ಜಯಂತಿ ಆಚರಿಸಲಿ

    ಚಿಕ್ಕಮಗಳೂರು: ದೇಶದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿ ಬಾಯಿ ಪುಲೆ ಅವರ ಜಯಂತಿಯನ್ನು ಎಲ್ಲ ಶಾಲಾ ಕಾಲೇಜುಗಳಲ್ಲೂ ಆಚರಿಸಬೇಕು ಎಂದು ಬಿಎಸ್‌ಪಿ ರಾಜ್ಯ ಕಾರ್ಯದರ್ಶಿ ಕೆ.ಬಿ.ಸುಧಾ ಹೇಳಿದರು.
    ನಗರದ ಬಿಎಸ್‌ಪಿ ಕಚೇರಿಯಲ್ಲಿ ಬುಧವಾರ ಏರ್ಪಡಿಸಿದ್ದ ಅಕ್ಷರದವ್ವ ಸಾವಿತ್ರಿಬಾಯಿ ಪುಲೆ ಅವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹೆಣ್ಣು ಮಕ್ಕಳು ಅಡುಗೆ ಮನೆಗೆ ಸೀಮಿತರಾಗಿ ಮನೆಯಿಂದ ಹೊರ ಬಾರದಂತಹ ಕಾಲದಲ್ಲಿ ಗಂಡನಿಅದಲೇ ಅಕ್ಷರ ಕಲಿತು ದೇಶದ ಮೊಟ್ಟ ಮೊದಲ ಮಹಿಳಾ ಶಿಕ್ಷಕಿಯಾದವರು ಸಾವಿತ್ರಿಬಾಯಿ ಫುಲೆ. ಅಂದಿನ ಬ್ರಿಟಿಷ್ ಸರ್ಕಾರ ಸಹ ಅವರಿಗೆ ಫಸ್ಟ್ ಲೇಡಿ ಟೀಚರ್ ಬಿರುದು ನೀಡಿ ಗೌರವಿಸಿದೆ ಎಂದರು.
    ತನ್ನಂತೆ ಉಳಿದ ಎಲ್ಲ ಹೆಣ್ಣು ಮಕ್ಕಳೂ ಶಿಕ್ಷಣವಂತರಾಗಬೇಕು ಎಂದು ಸ್ವಾತಂತ್ರ್ಯ ಪೂರ್ವದಲ್ಲೇ ಮೇಲ್ವರ್ಗದವರ ಕಿರುಕುಳ ಕಷ್ಟಗಳನ್ನು ಎದುರಿಸಿ 14 ಶಾಲೆಗಳನ್ನು ತೆರೆದವರು ಸಾವಿತ್ರಿಬಾಯಿ ಫುಲೆ. ಇಂತಹವರ ಜಯಂತಿಯನ್ನು ಶಾಲಾ ಕಾಲೇಜುಗಳಲ್ಲಿ ಆಚರಿಸದಿರುವುದು ವಿಪರ್ಯಾಸ. ಇದರಿಂದ ಎಷ್ಟೋ ಜನರಿಗೆ, ಇಂದಿನ ಮಕ್ಕಳಿಗೆ ಸಾವಿತ್ರಿಬಾಯಿ ಪುಲೆ ತಿಳಿದಿಲ್ಲ ಎಂದು ವಿಷಾದಿಸಿದರು.
    ಬಿಎಸ್‌ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ಮಾತನಾಡಿ, ಜ್ಯೋತಿ ಬಾಪುಲೆ ಹಾಗೂ ಸಾವಿತ್ರಿಬಾಯಿ ಫುಲೆ ಅವರು ಅಂದು ಧೈರ್ಯದಿಂದ ಮುನ್ನುಗ್ಗಿ ಶಾಲೆಗಳನ್ನು ತೆರೆಯದಿದ್ದರೇ, ಕೆಳ ವರ್ಗದ ಮಹಿಳೆಯರು ಇಂದಿಗೂ ಶಿಕ್ಷಣದಿಂದ ವಂಚಿತರಾಗಿಯೇ ಉಳಿಯುತ್ತಿದ್ದರು ಎಂದರು.
    ಸಾವಿತ್ರಿಬಾಯಿ ಪುಲೆ ಜಯಂತಿಯನ್ನು ಎಲ್ಲ ಶಾಲಾ ಕಾಲೇಜುಗಳಲ್ಲೂ ಆಚರಿಸುವ ಮೂಲಕ ಅವರನ್ನು ನಾಡಿಗೆ ಪರಿಚಯಿಸುವ ಕೆಲಸ ಮಾಡಬೇಕು. ಇನ್ನಾದರೂ ದೇಶದಲ್ಲಿ ಸಾವಿತ್ರಿಬಾಯಿ ಫುಲೆ ಅವರ ಜಯಂತಿ ಆಚರಣೆಗೆ ತರಬೇಕು ಎಂದು ಒತ್ತಾಯಿಸಿದರು.
    ಲೋಕಸಭಾ ಕ್ಷೇತ್ರದ ಸಂಯೋಜಕ ಕೆ.ಆರ್.ಗಂಗಾಧರ್, ಪಕ್ಷದ ಅಸೆಂಬ್ಲಿ ಅಧ್ಯಕ್ಷ ಸಿದ್ದಯ್ಯ, ಜಿಲ್ಲಾ ಉಪಾಧ್ಯಕ್ಷೆ ಕೆ.ಎಸ್. ಮಂಜುಳಾ, ಪ್ರಧಾನ ಕಾರ್ಯದರ್ಶಿ ಆರ್.ವಸಂತ್, ಈರಯ್ಯ, ಪ್ರೇಮ, ಗಿರೀಶ್, ಜಿನ್ನಪ್ಪ, ವೆಂಕಟೇಶ್, ಮಂಜುನಾಥ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts