More

    ವಿದ್ಯಾರ್ಥಿಗಳು ಕಲಿಕೆಗೆ ಒತ್ತು ನೀಡಲಿ

    ಗುಂಡ್ಲುಪೇಟೆ: ವಿದ್ಯಾರ್ಥಿಗಳು ಸರ್ಕಾರದ ಉನ್ನತ ಹುದ್ದೆಗಳನ್ನು ಪಡೆದುಕೊಳ್ಳಲು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಬೇಕು ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಸಲಹೆ ನೀಡಿದರು.

    ತಾಲೂಕಿನ ಬನ್ನಿತಾಳಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಸೂರು ಎಲೈಟ್ ಸಂಸ್ಥೆ ಕೊಡುಗೆಯಾಗಿ ನೀಡಿದ ಪ್ರೊಜೆಕ್ಟರ್ ಹಾಗೂ ಡಿಜಿಟಲ್ ತಂತ್ರಜ್ಞಾನದ ಸ್ಮಾರ್ಟ್ ಕ್ಲಾಸ್ ಸೇವೆಗೆ ಸೋಮವಾರ ಚಾಲನೆ ನೀಡಿ ಮಾತನಾಡಿದರು.

    ಒಂದು ಕಡೆ ಯುವಕರಿಗೆ ಉದ್ಯೋಗಗಳು ಸಿಗುತ್ತಿಲ್ಲ. ಮತ್ತೊಂದು ಕಡೆ ಸರ್ಕಾರಿ ಇಲಾಖೆಗಳಲ್ಲಿ ಸಾವಿರಾರು ಉದ್ಯೋಗಗಳು ಖಾಲಿ ಇವೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಎಷ್ಟು ವಿದ್ಯಾಭ್ಯಾಸ ಮಾಡಿದರೂ ಉದ್ಯೋಗ ದೊರಕದಂತಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಹೆಚ್ಚಿನ ಕಲಿಕೆಗೆ ಒತ್ತು ಕೊಡಬೇಕು ಎಂದರು.

    ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶೇಖರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಎಸ್.ಮಹೇಶ್, ಸಿಆರ್‌ಪಿ ಹರೀಶ್, ಮುಖ್ಯ ಶಿಕ್ಷಕ ದೊಡ್ಡಬಸವಯ್ಯ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts