More

    ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನ ನೀಡಲಿ

    ಬೇಲೂರು : ತಾಲೂಕು ಶರಣ ಸಾಹಿತ್ಯ ಪರಿಷತ್ ಹಾಗೂ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಟ್ರಸ್ಟ್ ವತಿಯಿಂದ ಡಾ.ಶ್ರೀ ಶಿವಕುಮಾರ ಸ್ವಾಮೀಜಿ 117 ನೇ ಜಯಂತಿಯನ್ನು ಪಟ್ಟಣದ ಶಿವಕುಮಾರ ಸ್ವಾಮೀಜಿ ಕಲ್ಯಾಣ ಮಂಟಪದಲ್ಲಿ ಸೋಮವಾರ ಆಚರಿಸಲಾಯಿತು.
    ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಹೆಬ್ಬಾಳು ಹಾಲಪ್ಪ ಮಾತನಾಡಿ, ಸರ್ಕಾರಗಳು ಮಾಡಬೇಕಾದ ಕಾರ್ಯವನ್ನು ಸಿದ್ಧಗಂಗಾಶ್ರೀಗಳು ಮಾಡಿ ತೋರಿಸಿದ್ದಾರೆ. ಇವರ ಹಾದಿಯಲ್ಲಿ ನಾಡಿನ ನೂರಾರು ಮಠ ಮಾನ್ಯಗಳು ಇಂದಿಗೂ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುತ್ತಾ ಬಂದಿವೆ. ಇದನ್ನು ಗಮನಿಸಿ ಶ್ರೀಗಳಿಗೆ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು. ಪಟ್ಟಣದ ಯಾವುದಾದರೂ ವೃತ್ತ ಅಥವಾ ರಸ್ತೆಗೆ ಡಾ.ಶ್ರೀಗಳ ಹೆಸರನ್ನಿಡಬೇಕು. ಅವರ ಹೆಸರಿನಲ್ಲಿ ವಸತಿ ಶಾಲೆಗಳನ್ನು ತೆರೆಯಬೇಕೆಂದು ಮನವಿ ಮಾಡಿದರು.
    ವೀರಶೈವ ಮಹಾಸಭಾದ ಮಾಜಿ ಅಧ್ಯಕ್ಷ ಸಿ.ಎಂ.ನಿಂಗರಾಜ್ ಮಾತನಾಡಿ, ಸಿದ್ಧಗಂಗಾಶ್ರೀಗಳು ಸಾಮಾನ್ಯ ಕುಟುಂಬದಲ್ಲಿ ಜನಿಸಿ ಅಸಾಮಾನ್ಯ ಸಾಧನೆಗೈದ ಮಹಾನುಭಾವರು. ಇಂತಹವರ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. 111 ವರ್ಷ ಬದುಕಿದ್ದ ಶ್ರೀಗಳು ತಮ್ಮ ಜೀವಾವಧಿ ಪೂರ್ತಿ ಕಾಯಕದ ಮಹತ್ವವನ್ನು ಈ ನಾಡಿಗೆ ನೀಡಿದ್ದಾರೆ. ಇಂತಹ ಪೂಜ್ಯರು ಜಾತಿ, ಧರ್ಮ ಭೇದವಿಲ್ಲದೆ ಎಲ್ಲರಿಗೂ ಶಿಕ್ಷಣ ನೀಡಿದ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ ಎಂದರು.

    ಹಾಸನ ಜಿಲ್ಲಾ ಕದಳಿ ಮಹಿಳಾ ವೇದಿಕೆ ಅಧ್ಯಕ್ಷೆ ತೀರ್ಥಕುಮಾರಿ, ಹಿರಿಯ ಪತ್ರಕರ್ತ ತೊ.ಚ.ಅನಂತಸುಬ್ಬರಾಯ, ಕದಳಿ ಮಹಿಳಾ ವೇದಿಕೆ ಉಪಾಧ್ಯಕ್ಷೆ ಹೇಮಾ, ಖಜಾಂಚಿ ಉಮೇಶ್, ನಿವೃತ್ತ ಶಿಕ್ಷಕ ಧನಂಜಯ, ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ಯೋಜನಾಧಿಕಾರಿ ವಿನುತಾ, ವಿಜಯಲಕ್ಷ್ಮೀ, ವಿರೂಪಾಕ್ಷ, ಉಪನ್ಯಾಸಕ ಧನಂಜಯ, ಲಯನ್ಸ್ ಸಂಸ್ಥೆ ಅಧ್ಯಕ್ಷ ವೈ.ಬಿ.ಸುರೇಶ್, ಕಾವೇರಿ ಕ್ಲಿನಿಕ್ ವೈದ್ಯ ಡಾ.ಚಂದ್ರಮೌಳಿ, ತಾಲೂಕು ವೀರಶೈವ ಮಹಾಸಭಾ ಅಧ್ಯಕ್ಷ ರವಿಕುಮಾರ್, ಡಾ.ರಾಜಕುಮಾರ ಅಭಿಮಾನಿ ಸಂಘದ ಅಧ್ಯಕ್ಷ ತೀಥರ್ಂಕರ, ಕಸಾಪ ಮಾಜಿ ಅಧ್ಯಕ್ಷ ಮ.ಶಿವಮೂರ್ತಿ, ಕರವೇ ಕಾರ್ಯದರ್ಶಿ ಅಬ್ದುಲ್ ಖಾದರ್ ಸೇರಿದಂತೆ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts