More

    ನಿರ್ಣಯಗಳು ಪರಿಣಾಮಕಾರಿಯಾಗಿ ಜಾರಿಯಾಗಲಿ

    ಸೋಮವಾರಪೇಟೆ: ಇಲ್ಲಿನ ಕೊಡವ ಸಮಾಜದ ಮೇಲಿನ ಸಭಾಂಗಣದಲ್ಲಿ ತಾಲೂಕು ಕಾಫಿ ಬೆಳೆಗಾರರ ಕುಂದುಕೊರತೆ ಸಭೆ ಸಂಘದ ಅಧ್ಯಕ್ಷ ಮೋಹನ್ ಬೋಪಣ್ಣ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯಿತು.

    ಬೋಪಣ್ಣ ಮಾತನಾಡಿ, ಇತ್ತೀಚಿನ ವರ್ಷಗಳಲ್ಲಿ ಕಾಫಿ ಬೆಳೆಗಾರರು ಸಂಕಷ್ಟದಲ್ಲಿ ಜೀವನ ನಡೆಸುವಂತಾಗಿದೆ. ಹವಾಮಾನ ವೈಪರೀತ್ಯದಿಂದ ಕಾಫಿ ತೋಟ ಮತ್ತು ಬೆಳೆ ಉಳಿಸಿಕೊಳ್ಳುವುದೇ ಸಾಹಸವಾಗಿದೆ. ಬೆಳೆಗೆ ಬೆಲೆ ಇದ್ದರೂ, ತೋಟಗಳಲ್ಲಿ ಬೆಳೆ ಇಲ್ಲ. ಕೂಲಿ ಕಾರ್ಮಿಕರ ವೇತನ, ರಾಸಾಯನಿಕ ಗೊಬ್ಬರ ಸೇರಿದಂತೆ ಎಲ್ಲದರ ಬೆಲೆ ಹೆಚ್ಚಳದಿಂದಾಗಿ ತೋಟಗಳ ನಿರ್ವಹಣಾ ವೆಚ್ಚ ದುಪ್ಪಟ್ಟಾಗಿದೆ. ಆದ್ದರಿಂದ ಬೆಳೆಗಾರರು ಕೆಲವೊಂದು ನಿರ್ಣಯ ಕೈಗೊಂಡು ಅದು ಪರಿಣಾಮಕಾರಿಯಾಗಿ ಜಾರಿಯಾಗುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಹೇಳಿದರು.

    ಕಾರ್ಮಿಕರ ವೇತನ ಮತ್ತು ಕೆಲಸದ ಸಮಯ ನಿಗದಿಗೊಳಿಸುವಂತೆ ಸಭೆಯಲ್ಲಿ ಪಾಲ್ಗೊಂಡಿದ್ದ ಬೆಳೆಗಾರರು ಮನವಿ ಮಾಡಿದ ಹಿನ್ನೆಲೆಯಲ್ಲಿ ಎಲ್ಲ ತೋಟಗಳಲ್ಲಿ ಕಾರ್ಮಿಕರು ಬೆಳಗ್ಗೆ 9 ಂದ ಸಂಜೆ 4.30ರ ವರೆಗೆ ಕೆಲಸ ಮಾಡಬೇಕು. ಕಾರ್ಮಿಕರ ವೇತನ ಮತ್ತು ಪಿಕ್‌ಅಪ್ ವಾಹನದ ಬಾಡಿಗೆಗೆ ಸಂಬಂಧಿಸಿದಂತೆ ಮೇ 6ರಂದು ಮತ್ತೊಮ್ಮೆ ಬೆಳೆಗಾರರು, ಪಿಕ್‌ಅಪ್ ಮಾಲೀಕರು ಹಾಗೂ ಕಾರ್ಮಿಕ ಮುಖಂಡರೊಡನೆ ಚರ್ಚಿಸಿ ಸೂಕ್ತ ನಿರ್ಣಯ ಕೈಗೊಳ್ಳಲು ಸಭೆ ತೀರ್ಮಾನಿಸಿತು.

    ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಬಿ.ಎಂ.ಲವ, ಕಾರ್ಯದರ್ಶಿ ಪ್ರಕಾಶ್, ಕಾಫಿ ಬೆಳೆಗಾರರಾದ ಎಸ್.ಜಿ. ಮೇದಪ್ಪ, ಕೆ.ಎಸ್. ರಾಮಚಂದ್ರ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts