More

    ಪ್ರವಾಸಿ ತಾಣಗಳು ಹೊರ ಜಗತ್ತಿಗೆ ತೆರೆದುಕೊಳ್ಳಲಿ: ಸ್ನೇಹಲ್ ಲೋಖಂಡೆ

    ಶಿವಮೊಗ್ಗ: ಜಿಲ್ಲೆಯಾದ್ಯಂತ ಇರುವ ಅದ್ಭುತ ಪ್ರವಾಸಿ ತಾಣಗಳಿಗೆ ಜಾಗತಿಕ ಮತ್ತು ಆಂತರಿಕ ಪ್ರವಾಸಿಗರನ್ನು ಸೆಳೆಯಬೇಕಿದೆ. ಅವುಗಳನ್ನು ಸುಸ್ಥಿರ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಅಗತ್ಯವಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವ ಸ್ನೇಹಲ್ ಲೋಖಂಡೆ ಅಭಿಪ್ರಾಯಪಟ್ಟರು.

    ಕುವೆಂಪು ವಿವಿಯ ಪ್ರೊ. ಎಸ್.ಪಿ.ಹಿರೇಮಠ್ ಸಭಾಂಗಣದಲ್ಲಿ ವಿವಿ ಪ್ರವಾಸೋದ್ಯಮ ಅಧ್ಯಯನ ವಿಭಾಗ ಮತ್ತು ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಬುಧವಾರ ಏರ್ಪಡಿಸಿದ್ದ ವಿಶ್ವ ಪ್ರವಾಸೋದ್ಯಮ ದಿನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರವಾಸೋದ್ಯಮ ಕ್ಷೇತ್ರದಲ್ಲಿ ಭಾರತಕ್ಕೆ ವಿಪುಲ ಅವಕಾಶಗಳಿವೆ. ಸ್ಥಳೀಯ ಮಟ್ಟದಲ್ಲಿ ಅಡಗಿರುವ ವಿಶಿಷ್ಟ ಪ್ರವಾಸಿ ತಾಣಗಳಿಗೆ ಜಾಗತಿಕ ಮಟ್ಟದ ಮೂಲ ಸೌಕರ್ಯ ಒದಗಿಸುವುದರ ಜತೆಗೆ ಅವುಗಳನ್ನು ಪರಿಸರಸ್ನೇಹಿಯನ್ನಾಗಿ ಮಾಡಬೇಕಿದೆ. ಇಂತಹ ಪ್ರವಾಸಿ ತಾಣಗಳಿಗೆ ವ್ಯಾಪಕ ಪ್ರಚಾರವೂ ಅಗತ್ಯವಿದೆ ಎಂದರು.
    ವಿವಿ ಕುಲಪತಿ ಪ್ರೊ. ಎಸ್.ವೆಂಕಟೇಶ್ ಮಾತನಾಡಿ, ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಅಧಿಕ ಉದ್ಯೋಗಾವಕಾಶಗಳಿವೆ. ಜಿಲ್ಲಾಡಳಿತ, ಖಾಸಗಿ ಸಂಸ್ಥೆಗಳ ಸಹಯೋಗದಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಸಂಬಂಧಿಸಿದ ಕೌಶಲಗಳನ್ನು ಬಳಸಿಕೊಂಡು ಉದ್ಯೋಗ ಸೃಷ್ಟಿಸುವುದರತ್ತ ಗಮನಹರಿಸಬೇಕಿದೆ ಎಂದು ಹೇಳಿದರು.
    ಪ್ರವಾಸೋದ್ಯಮ ಅಧ್ಯಯನ ವಿಭಾಗದ ಅಧ್ಯಕ್ಷ ಪ್ರೊ. ಎಚ್.ಎನ್.ರಮೇಶ್, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಟಿ.ಧರ್ಮಪ್ಪ, ಡಾ. ಕೆ.ಆರ್.ಮಂಜುನಾಥ್, ಇಲಾಖೆಯ ಅಮಿತ್ ಮತ್ತು ಸಿಬ್ಬಂದಿ, ಪಿಇಎಸ್ ಕಾಲೇಜು, ಸಹ್ಯಾದ್ರಿ ವಾಣಿಜ್ಯ ಹಾಗೂ ನಿರ್ವಹಣಾ ಕಾಲೇಜು, ಕುವೆಂಪು ವಿವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts