More

    ಚಳಿಗಾಲದ ಅಧಿವೇಶನ ಸುವರ್ಣಸೌಧದಲ್ಲಿ ನಡೆಯಲಿ: ಬಿಎಸ್‌ವೈ

    ಶಿವಮೊಗ್ಗ: ಬೆಳಗಾವಿಯಲ್ಲಿ ಕೋಟ್ಯಂತರ ರೂ. ಖರ್ಚು ಮಾಡಿ ಸುವರ್ಣಸೌಧ ನಿರ್ಮಾಣ ಮಾಡಿದ್ದೇವೆ. ಅಲ್ಲಿ ಅಧಿವೇಶನ ನಡೆಯಲಿಲ್ಲ ಎಂದರೆ ಮೂಲ ಉದ್ದೇಶವೇ ಈಡೇರುವುದಿಲ್ಲ. ಹೀಗಾಗಿ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲೇ ನಡೆಸಲು ಸರ್ಕಾರ ತೀರ್ಮಾನ ಕೈಗೊಳ್ಳಬೇಕೆಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದರು.

    ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಅಧಿವೇಶನ ಎಲ್ಲಿ ನಡೆಸಬೇಕೆಂಬ ಅಂತಿಮ ತೀರ್ಮಾನ ಸರ್ಕಾರದ್ದೇ ಆಗಿದೆ. ಆದರೆ ಬೆಳಗಾವಿಯಲ್ಲಿ ವರ್ಷಕ್ಕೆ ಒಂದು ಅಧಿವೇಶನವೂ ನಡೆಯದೇ ಇದ್ದರೆ ನೈಜ ಉದ್ದೇಶವೇ ಸಾಕಾರಗೊಳ್ಳುವುದಿಲ್ಲ ಎಂದರು.
    ಬಿಜೆಪಿ ಸಂಘಟನೆ ನಿಮಿತ್ತ ರಾಜ್ಯ ಪ್ರವಾಸ ಕೈಗೊಳ್ಳುವ ಬಗ್ಗೆ ಪ್ರತಿಕ್ರಿಯಿಸಿದ ಬಿಎಸ್‌ವೈ, ನಾನು ಈಗಾಗಲೇ ಪ್ರವಾಸ ಆರಂಭಿಸಬೇಕಿತ್ತು. ಆದರೆ ಎಲ್ಲರೂ ಒಗ್ಗೂಡಿ ಪ್ರವಾಸ ಮಾಡಬೇಕೆಂಬ ಕಾರಣದಿಂದ ಹಬ್ಬದ ಬಳಿಕ ಸಂಘಟನೆಗೆ ಒತ್ತು ನೀಡಲಾಗುವುದು. ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಲಾಗುವುದು ಎಂದು ಹೇಳಿದರು. ವಿದ್ಯುತ್ ಲೋಡ್ ಶೆಡ್ಡಿಂಗ್‌ಗೆ ಸರ್ಕಾರ ಪರಿಹಾರ ಕಂಡುಕೊಳ್ಳಬೇಕೆಂದು ಇದೇ ಸಂದರ್ಭದಲ್ಲಿ ಆಗ್ರಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts