More

    ಪೌರ ಕಾರ್ಮಿಕರನ್ನು ಗೌರವಿಸೋಣ

    ವಿಜಯಪುರ : ಗ್ರಾಮ, ನಗರ ಸ್ವಚ್ಛತೆ ಹೆಚ್ಚಿಸುವಲ್ಲಿ ಪೌರ ಕಾರ್ಮಿಕರ ಪಾತ್ರ ಅನನ್ಯವಾಗಿದ್ದು, ಸಮಾಜದಲ್ಲಿ ಪೌರ ಕಾರ್ಮಿಕರಿಗೆ ಗೌರವ ನೀಡುವುದು ಪ್ರತಿ ನಾಗರಿಕನ ಕರ್ತವ್ಯ ಎಂದು ಜಿಪಂ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ ಹೇಳಿದರು.

    ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ನಗರಭಿವೃದ್ಧಿ ಕೋಶ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ‘ಪೌರ ಕಾರ್ಮಿಕರಿಗೆ ಇಎಸ್‌ಐ, ಪಿಎಫ್ ವಿಮೆ, ಸ್ವಚ್ಛತೆ ಮತ್ತು ಆರೋಗ್ಯ ಕುರಿತು ಅರಿವು ಮೂಡಿಸುವ ಒಂದು ದಿನದ ಕಾರ್ಯಗಾರ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

    ಪೌರ ಕಾರ್ಮಿಕರ ಗೌರವಕ್ಕೆ ಕುಂದು ಬಾರದಂತೆ ನಡೆದುಕೊಳ್ಳಬೇಕು. ಅವರು ನಿರ್ವಹಿಸುವ ಕಾರ್ಯ ಅನನ್ಯವಾಗಿದೆ. ಸ್ವಚ್ಛ ಸುಂದರ ನಗರವನ್ನಾಗಿಸುವಲ್ಲಿ ಅವರು ನಿರ್ವಹಿಸುವ ಕಾರ್ಯ ಮಹತ್ತರವಾಗಿದೆ.

    ಅದರಂತೆ, ಪೌರ ಕಾರ್ಮಿಕರು ಸಹ ತಮ್ಮ ವೈಯಕ್ತಿಕ ಆರೋಗ್ಯದ ಕುರಿತು ನಿಗಾವಹಿಸಿ, ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು. ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಿ ಅವರನ್ನು ವಿದ್ಯಾವಂತರನ್ನಾಗಿ ಮಾಡಿ, ಉನ್ನತ ಹುದ್ದೆಗೇರಲು ಪ್ರೇರೇಪಿಸಬೇಕು ಎಂದು ಹೇಳಿದರು.

    ಇದನ್ನೂ ಓದಿ: ಶಾಸಕ ಯತ್ನಾಳ ವಿರುದ್ಧ ತೀವ್ರ ವಾಗ್ದಾಳಿ, ಮುಖವಾಡ ಬಯಲಿಗೆಳೆಯದೆ ಬಿಡೆನೆಂದ ಬಿಜೆಪಿ ವಕ್ತಾರ ಸುರೇಶ ಬಿರಾದಾರ ಹೇಳಿದ್ದೇನು?

    ಮಹಾನಗರ ಪಾಲಿಕೆ ಆಯುಕ್ತ ಬದ್ರುದಿನ್ ಸೌದಾಗರ ಮಾತನಾಡಿ, ನಗರ ಸ್ವಚ್ಛತೆಗಾಗಿ ಹಾಗೂ ಆರೋಗ್ಯ ಪೂರ್ಣ ಪರಿಸರ ನಿರ್ಮಾಣಕ್ಕಾಗಿ ಪೌರ ಕಾರ್ಮಿಕರು ಅನಾರೋಗ್ಯಕರ ವಾತಾವರಣದಲ್ಲಿಯೂ ಪ್ರತಿನಿತ್ಯ ಶ್ರಮ ವಹಿಸುತ್ತಾರೆ.

    ಅವರ ಕಾರ್ಯವನ್ನು ಪ್ರತಿಯೊಬ್ಬರು ಗೌರವಿಸಬೇಕು. ಸರ್ಕಾರ ಪೌರಕಾರ್ಮಿಕರಿಗೆ ಅನೇಕ ಸವಲತ್ತು ನೀಡುತ್ತಿದೆ. ಪೌರ ಕಾರ್ಮಿಕರಿಗಿರುವ ಸೌಲಭ್ಯಗಳ ಕುರಿತು ಅರಿವು ಮೂಡಿಸಲು ಈ ಕಾರ್ಯಾಗಾರ ಆಯೋಜಿಸಿಲಾಗಿದೆ ಎಂದು ಹೇಳಿದರು.

    ಸರ್ಕಾರದಿಂದ ಪೌರ ಕಾರ್ಮಿಕರಿಗಾಗಿ ಪ್ರತಿ ತಿಂಗಳು 2 ಸಾವಿರ ರೂ. ಸಂಕಷ್ಟ ಭತ್ಯೆ, ವಿಶೇಷ ಭತ್ಯೆ ವರ್ಷದಲ್ಲಿ 21 ದಿನಗಳ ವಿಶೇಷ ಹೆಚ್ಚುವರಿ ವೇತನ, ಪೌರಕಾರ್ಮಿಕರ ಮಕ್ಕಳ ಶಿಕ್ಷಣಕ್ಕಾಗಿ ಸಹಾಯಧನ, ವಸತಿಯಲ್ಲಿ ಸಹಾಯ ಧನ, ವಿಮೆ ಸೌಲಭ್ಯ ಸೇರಿದಂತೆ ಅಗತ್ಯ ಎಲ್ಲಾ ಸೌಲಭ್ಯ ಸವಲತ್ತುಗಳನ್ನು ಸರಕಾರದ ವತಿಯಿಂದ ನೀಡಲಾಗುತ್ತಿದ್ದು, ಇದರ ಸದುಪಯೋಗ ಪಡೆಯಿರಿ ಎಂದು ಮನವರಿಕೆ ಮಾಡಿದರು.

    ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವಿಜಯಕುಮಾರ ಮೆಕ್ಕಳಕಿ ಮಾತನಾಡಿ, ನಮ್ಮ ದೇಶದ ಬೆನ್ನೆಲುಬು ಎಂದು ರೈತರನ್ನು ಕರೆಯುತ್ತೇವೆ. ಅದರಂತೆ ದೇಶದ ಸ್ವಚ್ಛತೆಯನ್ನು ಕಾಪಾಡುವವರು ಪೌರಕಾರ್ಮಿಕರು. ಹಾಗಾಗಿ ಅವರು ಕೂಡ ಈ ದೇಶದ ಬೆನ್ನೆಲುಬು ಎಂದು ಹೇಳಬಹುದು. ಸಮಾಜದಲ್ಲಿ ಪೌರಕಾರ್ಮಿಕರನ್ನು ಗೌರವದಿಂದ ಕಾಣಬೇಕು.

    ಸರ್ಕಾರದ ಯೋಜನೆಗಳನ್ನು ಪೌರ ಕಾರ್ಮಿಕರು ಪಡೆದುಕೊಳ್ಳಬೇಕು. ಸದುಪಯೋಗ ಪಡೆದುಕೊಂಡು ನೆಮ್ಮದಿ ಬದುಕು ಕಟ್ಟಿಕೊಳ್ಳಬೇಕು ಎಂದರು.

    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ಎಸ್.ಎಂ. ಗುಣಾರಿ ಪ್ರತಿಯೊಬ್ಬ ಪೌರ ಕಾರ್ಮಿಕರು ಆಯುಷ್ಮಾನ್ ಅರೋಗ್ಯ ಕಾರ್ಡ್ ಪಡೆಯಿರಿ, ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಹೊಂದಿದ ಪ್ರತಿಯೊಬ್ಬರು ಉಚಿತವಾಗಿ ಆಯುಷ್ಮಾನ್ ಕಾರ್ಡ್ ಪಡೆದು, ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು ಎಂದು ಹೇಳಿದರು.

    ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪುಂಡಲೀಕ ಮಾನವರ ಸ್ವಾಗತಿಸಿದರು. ಭೀಮರಾಯ ಜಿಗಜಿಣಗಿ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts