ದೇಸಿ ಕ್ರೀಡೆಗಳನ್ನು ಬೆಳೆಸುವ ಕೆಲಸವಾಗಲಿ

blank

ಯಳಂದೂರು: ಭಾರತದ ಅಪ್ಪಟ ದೇಸಿ ಕ್ರೀಡೆಗಳಾದ ಖೋಖೋ, ಕಬಡ್ಡಿ ಸೇರಿದಂತೆ ಇತರ ಕ್ರೀಡೆಗಳು ಪ್ರಸ್ತುತ ಅಂತಾರಾಷ್ಟ್ರೀಯ ಕ್ರೀಡೆಗಳಾಗಿ ಮಾರ್ಪಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದ್ದು, ಇಂತಹ ಇನ್ನಷ್ಟು ಕ್ರೀಡೆಗಳನ್ನು ಬೆಳೆಸುವ ಕೆಲಸವಾಗಬೇಕಿದೆ ಎಂದು ಕಾಂಗ್ರೆಸ್ ಮುಖಂಡ ಕಂದಹಳ್ಳಿ ನಂಜುಂಡಸ್ವಾಮಿ ಹೇಳಿದರು.

blank

ಇತ್ತೀಚೆಗೆ ಕೆಸ್ತೂರು ಯೂತ್ ಕಬಡ್ಡಿ ಅಸೋಸಿಯೇಷನ್ ವತಿಯಿಂದ ತಾಲೂಕಿನ ಕೆಸ್ತೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಆಯೋಜಿಸಿದ್ದ ಪ್ರಥಮ ವರ್ಷದ ಜಿಲ್ಲಾ ಮಟ್ಟದ ಆಹ್ವಾನಿತ ಕಬಡ್ಡಿ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಗ್ರಾಮೀಣರಲ್ಲಿ ಅನೇಕ ಯುವ ಪ್ರತಿಭೆಗಳಿದ್ದು, ತಮ್ಮ ಪ್ರತಿಭೆಯನ್ನು ಧಾರೆ ಎರೆದಲ್ಲಿ ಮುಂದಿನ ದಿನಗಳಲ್ಲಿ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಬಹುದು. ಇಂತಹ ಪ್ರತಿಭೆಗಳಿಗೆ ಸೂಕ್ತ ಮಾರ್ಗದರ್ಶನದ ಅವಶ್ಯಕತೆ ಇದ್ದು, ನಗರ ಪ್ರದೇಶದಲ್ಲಿರುವ ಕ್ರೀಡಾ ಕ್ಲಬ್‌ಗಳು ಇವರಿಗೆ ಉಚಿತ ತರಬೇತಿ ನೀಡುವ ಕೆಲಸವನ್ನು ಮಾಡಬೇಕು ಎಂದು ಸಲಹೆ ನೀಡಿದರು.

ಕೆಸ್ತೂರು ತಂಡಕ್ಕೆ ಪ್ರಥಮ ಬಹುಮಾನ: ಕಬಡ್ಡಿ ಪಂದ್ಯಾವಳಿಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಿಂದ 16 ತಂಡಗಳು ಭಾಗವಹಿಸಿದ್ದವು. ಇದರಲ್ಲಿ ಕೆಸ್ತೂರು ತಂಡವು ಪ್ರಥಮ ಸ್ಥಾನ ಪಡೆದುಕೊಂಡಿತು. ಶಿವಪುರ ತಂಡ ದ್ವಿತೀಯ ಸ್ಥಾನ ಪಡೆಯಿತು. ಗೆದ್ದ ತಂಡಗಳಿಗೆ ನಗದು ಬಹುಮಾನ ಹಾಗೂ ಆಕರ್ಷಕ ಟ್ರೋಫಿಯನ್ನು ವಿತರಿಸಲಾಯಿತು.

ಗ್ರಾಮದ ಡಿ.ಎನ್.ನಾಗರಾಜು, ಪಂದ್ಯಾವಳಿ ಆಯೋಜಕ, ಕೋಚ್ ಮಾದೇಶ್, ದೈಹಿಕ ಶಿಕ್ಷಕರಾದ ಮಲ್ಲಿಕಾರ್ಜುನಸ್ವಾಮಿ, ರಾಜು, ಸಿದ್ದಶೆಟ್ಟಿ, ಸಿದ್ದಪ್ಪಸ್ವಾಮಿ, ಮಹೇಶ್, ರಂಗಸ್ವಾಮಿ, ಶಿಕ್ಷಕ ಕುಮಾರ್, ರೇಣು, ರಂಗರಾಜು, ಚಂದ್ರಶೇಖರ್, ಶ್ರೀನಿವಾಸ್ ಇತರರಿದ್ದರು.

 

Share This Article

ಒಣಗಿದ ಮಾವು, ಪೇರಲ ಮತ್ತು ಹಲಸಿನ ಎಲೆಗಳಿಗೆ ಹೆಚ್ಚಿದ ಬೇಡಿಕೆ! ಒಂದು ಪ್ಯಾಕೆಟ್ ಬೆಲೆ 500 ರೂ. dried mango leaves

dried mango leaves : ಹಿಂದೂ ಧರ್ಮದಲ್ಲಿ ಮಾವಿನ ಎಲೆಗಳಿಗೆ ವಿಶೇಷ ಸ್ಥಾನವಿದೆ. ಶುಭ ಸಮಾರಂಭಗಳು…

ಈ ಜ್ಯೂಸ್ ಕುಡಿದರೆ ಸಾಕು.. ತೂಕ ಇಳಿಸಿಕೊಳ್ಳಲು ಬೆವರು ಸುರಿಸಿ ಕಷ್ಟಪಡುವ ಅಗತ್ಯವಿಲ್ಲ! juice

juice: ತೂಕ ಇಳಿಸಿಕೊಳ್ಳಲು ಜನರು ಅನೇಕ ಪ್ರಯತ್ನಗಳನ್ನು ಮಾಡುತ್ತಾರೆ. ಅವರು ಜಿಮ್‌ನಲ್ಲಿ ಕಷ್ಟಪಟ್ಟು ಕೆಲಸ ಮಾಡುತ್ತಾರೆ,…

ಪ್ರತಿದಿನ ಸ್ನಾನ ಮಾಡುವ ಮೊದಲು ಇವುಗಳನ್ನು ನಿಮ್ಮ ಮುಖಕ್ಕೆ ಹಚ್ಚಿಕೊಳ್ಳಿ.. ಆಗ ನಿಮ್ಮ ಮುಖ ಖಂಡಿತವಾಗಿಯೂ ಸುಂದರವಾಗಿ ಹೊಳೆಯುತ್ತದೆ! Beauty Tips

Beauty Tips : ಮಹಿಳೆಯರು ಸಾಮಾನ್ಯವಾಗಿ ಸುಂದರವಾಗಿ ಕಾಣಲು ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ಕ್ರೀಮ್‌ಗಳನ್ನು ಬಳಸುತ್ತಾರೆ.…