ಮೈಸೂರು: ಇಲ್ಲೊಬ್ಬ ಭೂಪ ನನ್ನ ಮೊಬೈಲ್ ಕಳೆದು ಹೋಗಿದೆ. ಹುಡುಕಿಸಿ ಕೊಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.
ಪಿರಿಯಾಪಟ್ಟಣ ತಾಲೂಕಿನ ಕುಂದನಹಳ್ಳಿ ಜನತಾ ಬಡಾವಣೆಯ ನಿವಾಸಿ ಶಿವಣ್ಣ ಪತ್ರ ಬರೆದವರು.
ಆ.25ರಂದು ಬೆಳಗ್ಗೆ 10.30ರ ಸಮಯದಲ್ಲಿ ಗ್ರಾಮಾಂತರ ಬಸ್ ನಿಲ್ದಾಣದಿಂದ ಉಡ್ ಲ್ಯಾಂಡ್ಸ್ ಚಿತ್ರಮಂದಿರದತ್ತ ನಾನು ನಡೆದುಕೊಂಡು ಹೋಗುತ್ತಿದೆ. ಈ ವೇಳೆ ಕಳ್ಳರು ನನ್ನ ಮೊಬೈಲ್ ಅನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ. ಮೊಬೈಲ್ ಹುಡುಕಿಕೊಡುವಂತೆ ಲಷ್ಕರ್ ಠಾಣೆಯಲ್ಲಿ ದೂರು ನೀಡಿದ್ದೆ. ಇನ್ನೂ ಮೊಬೈಲ್ ಹುಡುಕಿಕೊಟ್ಟಿಲ್ಲ. ಪ್ಲೀಸ್ ನೀವಾದ್ರೂ ನನ್ನ ಮೊಬೈಲ್ ಸಿಗುವಂತೆ ಸಹಕರಿಸಿ ಎಂದು ಸಿಎಂಗೆ ಶಿವಣ್ಣ ಪತ್ರ ಬರೆದಿದ್ದಾರೆ.
ನನ್ನ ತಂದೆಗೆ ಹಲವು ಕಾಲ್ಗರ್ಲ್ ಜತೆ ಸಂಪರ್ಕ ಇತ್ತು, ಅವನೊಬ್ಬ ಕಾಮುಕ, ಮಹಿಳೆಯರನ್ನ ಟ್ರ್ಯಾಪ್ ಮಾಡ್ತಿದ್ದ…
ಪದೇಪದೆ ಸರ್ಪಗಳು ಬರುತ್ತಿವೆ… ಎಂದು ಮನೆಯಲ್ಲಿ ಬಾವಿ ತೋಡಿದ ದಂಪತಿ! ವಾರದ ಬಳಿಕ ಕಾದಿತ್ತು ಶಾಕ್