More

    ಗ್ರಂಥಾಲಯಗಳು ಜ್ಞಾನ ಪ್ರಜ್ವಲಿಸುವ ಕೇಂದ್ರಗಳು

    ಜಮಖಂಡಿ(ಗ್ರಾ): ವಿದ್ಯಾರ್ಥಿ ಜೀವನದಲ್ಲಿ ಪುಸ್ತಕಗಳು ಪ್ರಮುಖ ಪಾತ್ರ ವಹಿಸುವಂತೆ ಪುಸ್ತಕಗಳನ್ನು ಹೊಂದಿರುವ ಗ್ರಂಥಾಲಯ ಮನುಷ್ಯನ ಜೀವನ ರೂಪಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

    ಇಷ್ಟಪಟ್ಟು ಓದುವವರಿಗೆ ಜ್ಞಾನದ ಹೊಸ ಹೊಳವನ್ನು ನೀಡುವ ಅಕ್ಷಯ ಭಂಡಾರಗಳಾಗಿವೆ ಎಂದು ಶಿಕ್ಷಕ ಸಂಗಮೇಶ ಉಟಗಿ ಹೇಳಿದರು.

    ಸಮೀಪದ ಹುನ್ನೂರು ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ಡಾ.ಎಸ್. ಆರ್. ರಂಗನಾಥನ್ ಜನ್ಮದಿನದ ಪ್ರಯುಕ್ತ ಶನಿವಾರ ಹಮ್ಮಿಕೊಂಡ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್ನಿಂದ ದೂರ ಉಳಿದು ಗ್ರಂಥಾಲಯದ ಕಡೆ ಮುಖ ಮಾಡಬೇಕು.

    ಗ್ರಂಥಾಲಯದಲ್ಲಿರುವ ಪುಸ್ತಕಗಳು, ದೈನಂದಿನ ಪತ್ರಿಕೆಗಳನ್ನು ಓದಿ ಜ್ಞಾನವನ್ನು ಹೆಚ್ಚಿಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ತಮ್ಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

    ಇದನ್ನೂ ಓದಿ: ಆರಂಭಕ್ಕೆ ಸಜ್ಜಾಗಿವೆ 55 ಕೂಸಿನ ಮನೆಗಳು

    ಹುನ್ನೂರಿನ ಗ್ರಂಥಾಲಯ ಡಿಜಿಟಲ್ ಗ್ರಂಥಾಲಯವಾಗಿ ಪರಿವರ್ತನೆಯಾಗಿದೆ. ಗ್ರಂಥಪಾಲಕ ಶಂಕರ ಚಿಂಚಖಂಡಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು ಅವರ ಸೇವೆ ಅನುಪಮವಾಗಿದೆ ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಪ್ಪಣ್ಣ ಜನವಾಡ, ಉಪಾಧ್ಯಕ್ಷೆ ಅನ್ನಪೂರ್ಣ ಯಾದವಾಡ, ಸದಸ್ಯರಾದ ಗಿರೀಶ ಮೈಗೂರ, ದಯಾನಂದ ದೇಸಾಯಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಲ್ಲಪ್ಪ ರೂಗಿ, ಗ್ರಂಥಪಾಲಕ ಶಂಕರ ಚಿಂಚಖಂಡಿ, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts