More

    ಶ್ರೇಯೋಭಿವೃದ್ಧಿ ಬಯಸುವ ಗುರುಗಳ ಅಭಿನಂದನೆಯಿಂದ ಜೀವನ ಸಾರ್ಥಕ

    ನಾಪೋಕ್ಲು: ಪ್ರತಿಯೊಬ್ಬ ಗುರು ತನ್ನ ನೋವನ್ನು ಮರೆತು ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಯನ್ನು ಬಯಸುತ್ತಿರುತ್ತಾರೆ. ಅಂಥ ಗುರುಗಳನ್ನು ವಂದಿಸಿ ಅಭಿನಂದಿಸಿದಾಗ ವಿದ್ಯಾರ್ಥಿಯ ಜೀವನ ಸಾರ್ಥಕವಾಗುತ್ತದೆ ಎಂದು ಮೈಸೂರಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಪಟ್ಟಡ ಶಿವಕುಮಾರ್ ಅಭಿಪ್ರಾಯಪಟ್ಟರು.


    ಮದೆನಾಡಿನ ಬೆಳಕು ಮಾನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಸುವರ್ಣ ಮಹೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮದ ಸಮಾರೋಪದಲ್ಲಿ ಮಾತನಾಡಿ, ವಿದ್ಯಾರ್ಥಿ ಎಷ್ಟು ಎತ್ತರಕ್ಕೆ ಏರುತಾನೋ ಅಷ್ಟೇ ವಿಧೇಯರಾಗಿ ಗುರುಗಳ ಮುಂದೆ ನಡೆದುಕೊಳ್ಳಬೇಕು. ಗುರುಗಳ ಮಾರ್ಗದರ್ಶನದಿಂದ ಜೀವನದಲ್ಲಿ ಎದುರಾಗುವ ಯಾವುದೇ ಸೋಲುಗಳನ್ನು ಹಿಮ್ಮಟಿಸಿ ಮುನ್ನಡೆಯಬೇಕು ಎಂದು ಸಲಹೆ ನೀಡಿದರು.
    ಶಾಲೆ ಸ್ಥಾಪಕ ಶಿಕ್ಷಕಿ ಗೌರಮ್ಮ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಐವತ್ತು ವರ್ಷಗಳ ಹಿಂದಿನ ಸೇವೆಯನ್ನು ಮೆಲುಕು ಹಾಕಿದರು.


    ಮದೆಮಹೇಶ್ವರ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಿ.ಆರ್. ಜೋಯಪ್ಪ ಮಾತನಾಡಿ, ಶಿಕ್ಷಣ ಸಂಸ್ಥೆಗಳು ಸ್ಥಾಪನೆಯಾದ ಮೇಲೆ ಕ್ರಮೇಣ ಜನರು ಬಡತನದಿಂದ ಹೊರಬಂದು ಜೀವನ ರೂಪಿಸಿಕೊಳ್ಳಲು ಸಾಧ್ಯವಾಗಿದೆ ಎಂದರು.


    ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಬೈನೆರವನ ಇಂದ್ರ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಮುಖ್ಯ ಶಿಕ್ಷಕ ಎನ್.ಟಿ. ಸೋಮಯ್ಯ, ಮದೆ ಮಹೇಶ್ವರ ಪ್ರೌಢಶಾಲೆ ನಿವೃತ್ತ ಮುಖ್ಯೋಪಾಧ್ಯಾಯ ಎಂ.ಎಸ್.ಶಿವರಾವ್, ಬಿಆರ್‌ಸಿ ಮಂಜುಳಾ ಚಿತ್ರಾಪುರ, ಶಾಲೆಯ ಹಳೆಯ ವಿದ್ಯಾರ್ಥಿಗಳಾದ ಬಿ.ಎಂ.ಪ್ರಮಿಳಾ, ಧನಂಜಯ ಅಗೋಳಿಕಜೆ ಕ್ಯಾಪ್ಟನ್ ಹುಲಿ ಮನೆ ಹರೀಶ್ ಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಮಲಾಕ್ಷಿ, ಮುಖ್ಯ ಶಿಕ್ಷಕಿ ಭಾಗ್ಯಲಕ್ಷ್ಮೀ, ಎಸ್‌ಡಿಎಂಸಿ ಅಧ್ಯಕ್ಷ ರಾಧಾಕೃಷ್ಣ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬೈನೆರವನ ಯಶೋದಿನಿ, ಸದಸ್ಯರಾದ ರಾಮಯ್ಯ, ಸಜನ್, ಶಾಲಾ ಸಂಸ್ಥಾಪಕರ ಪುತ್ರ ಪಿ .ಆರ್ ರಮೇಶ್ ಇದ್ದರು.


    ಮದೆಮಹೇಶ್ವರ ಪ್ರೌಢಶಾಲೆ ಶಿಕ್ಷಕರಾದ ತೊತ್ತಿಯನ ಮಂದಣ್ಣ, ಬಿ.ಆರ್.ಜೋಯಪ್ಪ, ಎಂ.ಎಸ್.ಶಿವರಾಮ್ ಅವರನ್ನು ಸನ್ಮಾನಿಸಲಾಯಿತು. ನಾಡಿನ ಬೇರೆ ಬೇರೆ ಭಾಗಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಾಲೆಯ ಹಳೇ ವಿದ್ಯಾರ್ಥಿಗಳಾದ ಪಟ್ಟಡ ಶಿವಕುಮಾರ್, ಡಾ. ಪ್ರವೀಣ್, ಡಾ. ರಾಘವೇಂದ್ರ, ಕೆ.ಎಲ್. ಗಿರೀಶ್, ಬಿ. ಎಂ.ಪ್ರಮೀಳಾ, ಧನಂಜಯ ಅಗೋಳಿ ಕಜೆ, ಕ್ಯಾಪ್ಟನ್ ಹುಲಿ ಮನೆ ಡಿ ಹರೀಶ್ ಕುಮಾರ್, ರಾಷ್ಟ್ರಮಟ್ಟದ ಥ್ರೋಬಾಲ್ ಆಟಗಾರ್ತಿ ಬಿ.ಎಸ್.ಅನುಶ್ರೀ, ಯೋಗ ಪಟು ಸಿಂಚನಾ ಕೀರ್ತಿ ಕುಮಾರ್ ಅವರನ್ನು ಅಭಿನಂದಿಸಲಾಯಿತು.


    ಇದಕ್ಕೂ ಮೊದಲು ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ಕ್ರೀಡಾಕೂಟಕ್ಕೆ ಮದೆ ಮಾಧುರಪ್ಪ ದೇವಾಲಯದ ಆವರಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಮಲಾಕ್ಷಿ ಚಾಲನೆ ನೀಡಿದರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜನಮನ ಸೆಳೆದವು. 50 ವರ್ಷಗಳ ಅವಧಿಯ ಶಿಕ್ಷಕರು, ವಿದ್ಯಾರ್ಥಿಗಳು ಒಂದೆಡೆ ಕಲೆತು ಹಳೆಯ ದಿನಗಳನ್ನು ಮೆಲುಕು ಹಾಕುತ್ತ ಫೋಟೋ ತೆಗೆದು ಸಂಭ್ರಮಿಸಿದರು.


    ಸುವರ್ಣ ಮಹೋತ್ಸವ ಸಮಿತಿ ಪದಾಧಿಕಾರಿಗಳಾದ ಸುರೇಶ್, ತಾರಾನಾಥ್, ಪುಂಡರಿಕ, ಕೃಷ್ಣಪ್ಪ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts