‘ನನ್ನನ್ನು ಪೊಲೀಸರೇ ಸಾಯಿಸ್ತಾರೆ, ನ್ಯಾಯ ಕೊಡಿಸಿ’ ಎಂದು ಅಲವತ್ತುಕೊಂಡ ಯುವಕ!

ಬೆಂಗಳೂರು: ದಂಪತಿಯಿಂದ ನಿನ್ನೆ ಹೊಯ್ಸಳ ಸಿಬ್ಬಂದಿ ಹಣ ವಸೂಲಿ ಮಾಡಿ ಅಮಾನತಿಗೆ ಒಳಗಾದ ಬೆನ್ನಿಗೇ ಪೊಲೀಸ್ ದೌರ್ಜನ್ಯದ ಇನ್ನೊಂದು ಪ್ರಕರಣ ಬೆಳಕಿಗೆ ಬಂದಿದೆ. ಇದರಲ್ಲಂತೂ ಪೊಲೀಸರು ಸಾಯಿಸಲಿಕ್ಕೇ ಮುಂದಾಗಿದ್ದಾರೆ ಎಂಬ ಆರೋಪವೂ ಕೇಳಿ ಬಂದಿದೆ. ಖಾಸಗಿ ಸುದ್ದಿವಾಹಿನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ನಂದೀಶ್ ಕೊಡಗು ಎಂಬಾತ ತನ್ನ ಫೇಸ್​ಬುಕ್ ಖಾತೆಯಲ್ಲಿ ರಾಜರಾಜೇಶ್ವರಿನಗರ ಪೊಲೀಸ್ ಠಾಣಾ ಸಿಬ್ಬಂದಿ ವಿರುದ್ಧ ಗಂಭೀರ ಆರೋಪ ಹೊರಿಸಿ ಪೋಸ್ಟ್ ಮಾಡಿಕೊಂಡಿದ್ದಾನೆ. ಮಾತ್ರವಲ್ಲ, ಪೊಲೀಸರೇ ನನ್ನನ್ನು ಸಾಯಿಸ್ತಾರೆ, ನ್ಯಾಯ ಕೊಡಿಸಿ ಎಂದು ಅಲವತ್ತುಕೊಂಡಿದ್ದಾನೆ. ಇದನ್ನೂ ಓದಿ: ರಾತ್ರಿ … Continue reading ‘ನನ್ನನ್ನು ಪೊಲೀಸರೇ ಸಾಯಿಸ್ತಾರೆ, ನ್ಯಾಯ ಕೊಡಿಸಿ’ ಎಂದು ಅಲವತ್ತುಕೊಂಡ ಯುವಕ!