blank

ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಲಿಂಗದೀಕ್ಷೆ

Linga initiation to enhance moral values ​​in children

ಲೋಕಾಪುರ: ಅಯ್ಯಚಾರ ಲಿಂಗದೀಕ್ಷೆ ಮಕ್ಕಳಲ್ಲಿ ಸಂಸ್ಕಾರ ವೃದ್ಧಿಯಾಗುತ್ತದೆಂದು ಹಿರೇಮಠದ ಡಾ. ಚಂದ್ರಶೇಖರ ಸ್ವಾಮೀಜಿ ಹೇಳಿದರು.

ಪಟ್ಟಣದಲ್ಲಿ ಹನ್ನೊಂದು ದಿನಗಳ ಪರ್ಯಂತ ಹಮ್ಮಿಕೊಂಡಿದ್ದ ವೇದಾಧ್ಯಯನ ಸಂಸ್ಕೃತಿ, ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರಪಂಚದಲ್ಲಿ ಶಿವದೀಕ್ಷೆಗಿಂತ ದೊಡ್ಡ ದೀಕ್ಷೆ ಬೇರೆ ಇಲ್ಲ. ಶಿವದೀಕ್ಷೆ ತೆಗೆದುಕೊಂಡವರಿಗೆ ಲೌಕಿಕ ಬದುಕಿನಲ್ಲಿ ದೈವಿಗುಣ ಹೆಚ್ಚಾಗಲಿದೆ ಎಂದರು.

ಚಿಪ್ಪಲಕಟ್ಟಿಯ ಸಿದ್ಧಲಿಂಗ ಸ್ವಾಮೀಜಿ ಮಾತನಾಡಿ, ವೀರಶೈವ ಸಂಪ್ರದಾಯದಂತೆ ಜಂಗಮ ವಟುಗಳಿಗೆ ನೀಡುವ ಅಯ್ಯಚಾರ ಪದ್ಧತಿಯನ್ನು ಜಂಗಮರು ಉಳಿಸಿಕೊಂಡು ಹೋಗಬೇಕು. ಪೂರ್ವಜರ ಆಚಾರ, ವಿಚಾರಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಧರ್ಮ ರಕ್ಷಣೆಗೆ ಮುಂದಾಗಬೇಕು ಎಂದರು.

ಚಿಪ್ಪಲಕಟ್ಟಿಯ ಗುರುಸಿದ್ಧಯ್ಯ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಜ್ಯೋತಿ ಉಪ್ಪಾರ, ಸಮಾಜದ ಮುಖಂಡರಾದ ಆರ್.ಕೆ. ಮಠದ, ಎಸ್.ಎನ್.ಹಿರೇಮಠ, ಎಂ.ಎಂ. ವಿರಕ್ತಮಠ, ಗುಣಾಕರ ಶೆಟ್ಟಿ, ಸಂಕಪ್ಪ ಗಂಗಣ್ಣವರ, ಶಿವಪ್ಪ ಚೌಧರಿ, ಸೊಲಬಣ್ಣ ತೇಲಿ, ಶಂಕರ ತೇಲಿ, ಹುದ್ದಾರ, ಪರಶುರಾಮ ವನಶಿ, ಶಿವಪ್ಪ ಗಾಣಗೇರ, ಮುತ್ತಪ್ಪ ಗಂಗಣ್ಣವರ ಇದ್ದರು. ಆರ್.ಜಿ. ಮುತ್ತಿನಮಠ ಶಿಕ್ಷಕರು ನಿರೂಪಿಸಿದರು.

Share This Article

ಜಸ್ಟ್​ ಈ ಸಣ್ಣ ಕೆಲಸ ಮಾಡಿ… ನಿಮ್ಮ ಮುಖದ ಮೇಲಿನ ಮೊಡವೆಗಳನ್ನು ಸುಲಭವಾಗಿ ಕಡಿಮೆ ಮಾಡಿಕೊಳ್ಳಿ! Glowing Skin

Glowing Skin : ಪ್ರತಿಯೊಬ್ಬರೂ ಆರೋಗ್ಯಕರ ಮತ್ತು ಹೊಳೆಯುವ ಚರ್ಮವನ್ನು ಬಯಸುತ್ತಾರೆ. ಆದರೆ, ಪ್ರಸ್ತುತ ಕಾಲದಲ್ಲಿ,…

ಸಾಧನೆ ಸಂಭ್ರಮಿಸೋಣ ಸೇವೆಗೆ ಅಣಿಯಾಗೋಣ

ಮೊನ್ನೆಯಷ್ಟೇ ಕೇಂದ್ರ ಲೋಕಸೇವಾ ಆಯೋಗದ ಫಲಿತಾಂಶ ಬಂದಿತು. ಈ ಫಲಿತಾಂಶ ತಂದ ಸಂತಸ ಮತ್ತು ಸಂದೇಶ…

ಅನಾನಸ್​ ತಿನ್ನುವುದರಿಂದ ಎಷ್ಟೆಲ್ಲಾ ಲಾಭಗಳು ಗೊತ್ತಾ! ಆರೋಗ್ಯದ ಪ್ರಯೋಜನ ತಿಳಿಯಿರಿ.. Health Tips

Health Tips : ಸಿಹಿ ಮತ್ತು ಹುಳಿ ರುಚಿಯನ್ನು ಹೊಂದಿರುವ ಆಕರ್ಷಕ ಹಳದಿ ಹಣ್ಣಾದ ಅನಾನಸ್,…