ಲಿಂಗಸುಗೂರು: ಸ್ಥಳೀಯ ಪುರಸಭೆ ವ್ಯಾಪ್ತಿಯ ಎಲ್ಲ ವಾರ್ಡ್ಗಳಿಗೆ ಸಮರ್ಪಕ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿ ಕರುನಾಡ ವಿಜಯಸೇನೆ ಸಂಘಟನೆ ಕಾರ್ಯಕರ್ತರು ಪುರಸಭೆ ಸಿಒ ಜಗನ್ನಾಥ ಕುಲಕರ್ಣಿಗೆ ಸೋಮವಾರ ಮನವಿ ಸಲ್ಲಿಸಿದರು.
ಮೂಲ ಸೌಕರ್ಯಗಳಲ್ಲಿ ಪ್ರಮುಖವಾದ ಕುಡಿಯುವ ನೀರು ಅವಶ್ಯಕತೆಯಿದೆ. ಆದರೆ ಪಟ್ಟಣದ ವಾರ್ಡ್ಗಳಿಗೆ 4-5 ದಿನಕ್ಕೊಮ್ಮೆ ನೀರು ಪೂರೈಸುತ್ತಿರುವುದು ಅಧಿಕಾರಿಗಳ ಬೇಜವಾಬ್ದಾರಿ ಎದ್ದು ಕಾಣುತ್ತಿದೆ. ಅಧಿಕಾರಿಗಳು ಕೂಡಲೇ ತಾಂತ್ರಿಕ ತೊಂದರೆ ನಿವಾರಿಸಿ ಎಲ್ಲ ವಾರ್ಡ್ಗಳಿಗೆ ಸಮರ್ಪಕ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಪುರಸಭೆ ಕಚೇರಿ ಮುಂದೆ ಸಾರ್ವಜನಿಕರ ಜತೆಗೂಡಿ ಹೋರಾಟ ನಡೆಸುವುದಾಗಿ ತಿಳಿಸಿದರು.