ಲಿಂಗಸುಗೂರು: ರಾಮನಗರ ವಕೀಲರ ಮೇಲೆ ಸುಳ್ಳು ಪ್ರಕರಣ ದಾಖಲು ಹಾಗೂ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರಿಯ ವಕೀಲರ ಮೇಲಿನ ಹಲ್ಲೆ ಖಂಡಿಸಿ ತಾಲೂಕು ವಕೀಲರ ಸಂಘದ ನೇತೃತ್ವದಲ್ಲಿ ನ್ಯಾಯವಾದಿಗಳು ಪಟ್ಟಣದಲ್ಲಿ ಎಸಿ ಅವಿನಾಶ ಶಿಂಧೆಗೆ ಬುಧವಾರ ಮನವಿ ಸಲ್ಲಿಸಿದರು.
ತಾಲೂಕು ವಕೀಲರ ಸಂಘದ ಸಭಾಂಗಣದಲ್ಲಿ ತುರ್ತು ಸಭೆ ನಡೆಸಿದ ನ್ಯಾಯವಾದಿಗಳು, ನ್ಯಾಯಾಲಯದ ಕಾರ್ಯಕಲಾಪಗಳಿಂದ ದೂರ ಉಳಿದು ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ: ಗಲ್ಲಿ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್; ವಿಡಿಯೋ ವೈರಲ್
ರಾಮನಗರದ ಐಜೂರು ಪೊಲೀಸ್ ಠಾಣೆಯಲ್ಲಿ ಫೆ.7 ರಂದು ನಡೆದ ನೈಜ ಘಟನೆ ತಿರುಚಿ ದೂರುದಾರನೊಂದಿಗೆ ಪಿಎಸ್ಐ ಶಾಮೀಲಾಗಿ ಜಿಲ್ಲಾ ವಕೀಲರ ಸಂಘದ 45 ವಕೀಲರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಕೂಡಲೇ ಪ್ರಕರಣಗಳನ್ನು ಹಿಂಪಡೆಯಬೇಕು. ಅಲ್ಲದೇ ಪಿಎಸ್ಐ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರಿಯ ವಕೀಲ ಕೆ.ಕೆ.ಕೋತಾರ ಮೇಲೆ ಹಲ್ಲೆ ನಡೆಸಲಾಗಿದೆ. ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಅಲ್ಲದೆ ವಕೀಲರಿಗೆ ರಕ್ಷಣೆ ಒದಗಿಸಬೇಕೆಂದು ಆಗ್ರಹಿಸಿದರು.