ಕೆರೆ ತುಂಬಿಸುವ ಕಾರ್ಯಕ್ಕೆ ಚಾಲನೆ

blank

ವಿತರಣಾ ಕಾಲುವೆ ಮೂಲಕ ಕುಡಿವ ನೀರು ಪೂರೈಕೆಗೆ ಶಾಸಕ ಹೂಲಗೇರಿ ಕ್ರಮ

ಲಿಂಗಸುಗೂರು: ರಾಂಪೂರ ಏತನೀರಾವರಿ ಯೋಜನೆಯ ವಿತರಣಾ ಕಾಲುವೆ ಮೂಲಕ ಲಿಂಗಸುಗೂರು ಪಟ್ಟಣದ ಕುಡಿಯುವ ನೀರು ಸಂಗ್ರಹ ಕೆರೆಗೆ ನೀರು ತುಂಬಿಸುವ ಕಾರ್ಯಕ್ಕೆ ಶಾಸಕ ಡಿ.ಎಸ್.ಹೂಲಗೇರಿ ಹೂಲಗೇರಿ ಸೋಮವಾರ ಚಾಲನೆ ನೀಡಿದರು.

ಕಳೆದೆರಡು ದಶಕಗಳಿಂದ ಪುರಸಭೆ ವ್ಯಾಪ್ತಿಯ 23 ವಾರ್ಡ್‌ಗಳಿಗೆ ಸಮರ್ಪಕ ನೀರು ಪೂರೈಸುತ್ತಿದ್ದ ಕೆರೆಗೆ ಬೇಸಿಗೆ ವೇಳೆ ನಾರಾಯಣಪುರ ಬಲದಂಡೆ ನಾಲೆಯಿಂದ ನೀರು ತುಂಬಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದರು. ಬಲದಂಡೆ ನಾಲೆಯ ಆಧುನೀಕರಣ ಕಾಮಗಾರಿ ಕೈಗೆತ್ತಿಕೊಂಡ ಪ್ರಯುಕ್ತ ಮೇ.14 ರಂದು ನೀರು ನಾಲೆಗೆ ನೀರು ಹರಿಸುವುದನ್ನು ಸ್ಥಗಿತಗೊಳಿಸಲಾಯಿತು.

ಇದರಿಂದ ಕೆರೆಯಲ್ಲಿ ಕೇವಲ 15 ದಿನಕ್ಕಾಗುವಷ್ಟು ನೀರು ಉಳಿದಿತ್ತು. ಇದಕ್ಕೆ ಪರ್ಯಾಯ ಮಾರ್ಗವಾಗಿ ಕೆರೆ ಹತ್ತಿರ ಹಾದು ಹೋಗಿರುವ ರಾಂಪೂರ ಏತನೀರಾವರಿ ಯೋಜನೆ ವಿತರಣಾ ಕಾಲುವೆಯಿಂದ ಕೆರೆಗೆ ನೀರು ತುಂಬಿಸುವ ಉದ್ಧೇಶದಿಂದ ಯೋಜನೆಯ 6 ವಿತರಣಾ ಕಾಲುವೆ, 22 ಹೊಲಗಾಲುವೆಗಳನ್ನು ಬಂದ್ ಮಾಡಿ ಪೌರಕಾರ್ಮಿಕರು ಹಾಗೂ ಜೆಸಿಬಿ ಯಂತ್ರ ಬಳಸಿ ಕಾಲುವೆ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು. ಸೋಮವಾರ ಶಾಸಕ ಡಿ.ಎಸ್.ಹೂಲಗೇರಿ ವಿತರಣಾ ಕಾಲುವೆ ಮೂಲಕ ಕೆರೆಗೆ ನೀರು ತುಂಬಿಸುವ ಕಾರ್ಯಕ್ಕೆ ಚಾಲನೆ ನೀಡಿದರು.

Share This Article

ಬೇಸಿಗೆ ತಂಪಾಗಿರಲು ಹಾಲು ಹಾಕದ ಮಿಲ್ಕ್ ಶೇಕ್

ಬೇಸಿಗೆಯಲ್ಲೂ ನಮ್ಮನ್ನು ತಂಪಾಗಿಟ್ಟು, ಸಾಮಾನ್ಯವಾಗಿ ಆಗುವ ಸುಸ್ತನ್ನು ಕಡಿಮೆ ಮಾಡುವ ವಿಶೇಷ ಮಿಲ್ಕ್ ಶೇಕ್ ಬಗ್ಗೆ…

ಈ ಮಸಾಲೆಗಳು ವಿಟಮಿನ್ ಬಿ 12 ವೇಗವಾಗಿ ಹೆಚ್ಚಾಗಲು ಸಹಕರಿಸುತ್ತವೆ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಜೀವಸತ್ವಗಳು ದೇಹದ ಕಾರ್ಯನಿರ್ವಹಣೆಗೆ ಮಾತ್ರ ಅಗತ್ಯವಲ್ಲ, ಅವು ಶಕ್ತಿಯನ್ನು ಸಹ ಒದಗಿಸುತ್ತವೆ. ಅವುಗಳ ಕೊರತೆಯು ನರಗಳು,…

ಪಿರಿಯಡ್ಸ್​ ನೋವನ್ನು ಕಡಿಮೆ ಮಾಡುವುದು ಹೇಗೆ?; ಮಹಿಳೆಯರು ತಿಳಿದುಕೊಳ್ಳಲೆಬೇಕಾದ ಮಾಹಿತಿ | Health Tips

ಋತುಬಂಧವನ್ನು ಈ ರೀತಿ ಅರ್ಥಮಾಡಿಕೊಳ್ಳಬಹುದು. ಋತುಬಂಧ ಎಂಬ ಪದವು ಎರಡು ಗ್ರೀಕ್ ಪದಗಳಿಂದ ಬಂದಿದೆ. ಮೆನೊ…