More

    ನನ್ನ ಗಮನಕ್ಕೂ ತಂದಿದ್ದರು

    ಹುಬ್ಬಳ್ಳಿ: ಲಿಂಗಾಯತ ಸಮುದಾಯದ ಅಧಿಕಾರಿಗಳಿಗೆ ಸೂಕ್ತ ಸ್ಥಾನ ಸಿಗುತ್ತಿಲ್ಲ ಎಂದು ಹಲವು ಅಧಿಕಾರಿಗಳು ನನ್ನ ಗಮನಕ್ಕೂ ತಂದಿದ್ದರು. ಗುರು ಸ್ಥಾನದಲ್ಲಿ ಇರುವುದರಿಂದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಸುಮ್ಮನಿದ್ದೆ ಎಂದು ಕೂಡಲಸಂಗಮ ಪೀಠದ ಶ್ರೀ ಬಸವಜಯ ಮೃತ್ಯಂಜಯ ಸ್ವಾಮೀಜಿ ಹೇಳಿದರು.

    ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ, ಶಾಸಕ ಶಾಮನೂರ ಶಿವಶಂಕರಪ್ಪ ಅವರಿಗೆ ಲಿಂಗಾಯತ ಸಮುದಾಯದ ಅಧಿಕಾರಿಗಳು ತಮಗೆ ಅನ್ಯಾಯವಾಗುತ್ತಿರುವ ಬಗ್ಗೆ ಹೇಳಿರಬಹುದು. ಅದಕ್ಕೆ ಅವರು ಧ್ವನಿ ಎತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಅನ್ಯಾಯ ಸರಿಪಡಿಸಬೇಕು ಎಂದರು.

    ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಹಾಗೂ ಲಿಂಗಾಯತ ಉಪ ಪಂಗಡಗಳನ್ನು ಒಬಿಸಿ ಪಟ್ಟಿಗೆ ಸೇರ್ಪಡೆ ಮಾಡುವಂತೆ ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಆಗ್ರಹಿಸಿ ಕಳೆದ ಮೂರು ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ಈ ಹೋರಾಟದ ಭಾಗವಾಗಿ ಹುಬ್ಬಳ್ಳಿಯ ಗಬ್ಬೂರ ಬೈಪಾಸ್ ಬಳಿಯ ಮೈದಾನದಲ್ಲಿ ಅ. 13ರಂದು 6ನೇ ಹಂತದ ಸಮಾವೇಶ ಆಯೋಜಿಸಲಾಗಿದೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ, ಬೆಳಗಾವಿ ಜಿಲ್ಲೆಯ ನಿಪ್ಪಾಣಿ, ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಈಗಾಗಲೇ ಸಮಾವೇಶ ನಡೆಸಲಾಗಿದೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts