ಲಖನೌ: ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿನ ಲಿಕ್ಕರ್ ಮಾಫಿಯಾ ಮಟ್ಟಹಾಕಲು ಹೋಗಿ ದುಷ್ಕರ್ಮಿಗಳಿಂದ ಕಾನ್ಸ್ಟೇಬಲ್ ಹತ್ಯೆಯಾಗಿದ್ದು, ಪ್ರಕರಣದ ಪ್ರಮುಖ ಆರೋಪಿಯನ್ನು ಎನ್ಕೌಂಟರ್ನಲ್ಲಿ ಹೊಡೆದುರುಳಿಸಿರುವುದಾಗಿ ಪೊಲೀಸರು ಬುಧವಾರ ತಿಳಿಸಿದ್ದಾರೆ.
ಲಿಕ್ಕರ್ ಮಾಫಿಯಾ ಕಿಂಗ್ಪಿನ್ಗೆ ವಾರೆಂಟ್ ನೀಡಲು ಪೊಲೀಸ್ ತಂಡವೊಂದು ಕಾಸ್ಗಂಜ್ ಜಿಲ್ಲೆಯ ಗ್ರಾಮವೊಂದಕ್ಕೆ ತೆರಳಿತ್ತು. ಈ ವೇಳೆ ದುಷ್ಕರ್ಮಿಗಳು ಕಾನ್ಸ್ಟೇಬಲ್ ಹತ್ಯೆ ಮಾಡಿದ್ದು, ಸಬ್ ಇನ್ಸ್ಪೆಕ್ಟರ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆಂದು ಕಾಸ್ಗಂಜ್ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಸೊಂಕರ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿರಿ: ತುಂಬಿದ ಶಾಲೆಯಲ್ಲಿ ಮಕ್ಕಳ ಮುಂದೆ ಹಸ್ತಮೈಥುನ ಮಾಡಿ, ವಿಡಿಯೋ ಹರಿಬಿಟ್ಟ ಶಿಕ್ಷಕಿ..!
ಪ್ರಕರಣದ ಪ್ರಮುಖ ಆರೋಪಿಯನ್ನು ಎನ್ಕೌಂಟರ್ನಲ್ಲಿ ಹೊಡೆದುರುಳಿಸಲಾಗಿದೆ. ಮತ್ತೊಬ್ಬ ಆರೋಪಿ ಪರಾರಿಯಾಗಿದ್ದು, ಆತನಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮನೋಜ್ ತಿಳಿಸಿದ್ದಾರೆ.
ಕಾಸ್ಗಂಜ್ನಲ್ಲಿ ನಡೆದಿದ್ದೇನು?
ಅಕ್ರಮ ಲಿಕ್ಕರ್ ಕಾರ್ಖಾನೆ ಮೇಲೆ ದಾಳಿ ಮಾಡಲು ಮತ್ತು ಕಿಂಗ್ಪಿನ್ಗೆ ವಾರೆಂಟ್ ನೀಡಲು ತೆರಳಿದ ಪೊಲೀಸ್ ತಂಡದ ಮೇಲೆ ಗೂಂಡಾಗಳು ಮಂಗಳವಾರ ಸಂಜೆ ಕಾಸ್ಗಂಜ್ ಏರಿಯಾದಲ್ಲಿ ದಾಳಿ ಮಾಡಿದ್ದಾರೆ. ಈ ವೇಳೆ ಕಾನ್ಸ್ಟೇಬಲ್ ದೇವೇಂದ್ರ ಮೃತಪಟ್ಟಿದ್ದು, ಎಸ್ಐ ಅಶೋಕ್ ಕುಮಾರ್ಗೆ ಗಂಭೀರ ಗಾಯವಾಗಿದೆ. ಮೂಲಗಳ ಪ್ರಕಾರ ಗೂಂಡಾಗಳು ಪೇದೆಯನ್ನು ಹಿಡಿದು ಬಟ್ಟೆಯನ್ನು ಕಿತ್ತೆಸೆದು ದೊಣ್ಣೆ ಮತ್ತು ಶಸ್ತ್ರಾಸ್ತ್ರಾಗಳಿಂದ ಹಿಗ್ಗಾಮುಗ್ಗ ಥಳಿಸಿದ್ದಾರೆನ್ನಲಾಗಿದೆ.
ಇದನ್ನೂ ಓದಿರಿ: ಭೂಮಂಡಲದಲ್ಲಿ ನನ್ನಂಥ ನಟಿಯಿಲ್ಲ!; ಸುಳ್ಳಾದರೆ ಅಹಂಕಾರ ಬಿಡ್ತಾರಂತೆ ಕಂಗನಾ..
ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದೇನು?
ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಸಿಎಂ ಯೋಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಲ್ಲದೆ, ಮೃತ ಕಾನ್ಸ್ಟೇಬಲ್ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದು, ಗಾಯಾಳು ಎಸ್ಐಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ. (ಏಜೆನ್ಸೀಸ್)
ರಾಮಮಂದಿರ ನಿರ್ಮಾಣಕ್ಕೆ 51 ಲಕ್ಷ ರೂ. ದೇಣಿಗೆ ನೀಡಿ ಕಾಂಗ್ರೆಸ್ ಶಾಸಕಿ ಕೊಟ್ಟ ಕರೆ ಹೀಗಿದೆ…