More

    ಲಿಟಲ್ ಸ್ಕಾಲರ್ಸ್ ಅಕಾಡೆಮಿ ಕಾರ್ಯ ಮಾದರಿ

    ಸಿದ್ದಾಪುರ: ವಿರಾಜಪೇಟೆಯ ಲಿಟಲ್ ಸ್ಕಾಲರ್ಸ್ ಅಕಾಡೆಮಿ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಅವರ ಸಾಮಾಜಿಕ ಬದ್ಧತೆ ಮೆಚ್ಚುವಂತಹದ್ದು ಎಂದು ವಿರಾಜಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ್ ಅಭಿಪ್ರಾಯಪಟ್ಟರು.

    ಅಮ್ಮತ್ತಿ ಒಂಟಿಯಂಗಡಿಯ ಜಿ.ಎಂ.ಪಿ ಶಾಲೆಯಲ್ಲಿ ಲಿಟಲ್ ಸ್ಕಾಲರ್ಸ್ ಅಕಾಡೆಮಿ ವತಿಯಿಂದ ಸೋಮವಾರ ಆಯೋಜಿಸಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಮಾತನಾಡಿ, ಲಿಟಲ್ ಸ್ಕಾಲರ್ಸ್ ಶಾಲೆ ಇತರರಿಗೆ ಮಾದರಿಯಾಗಿದ್ದು, ಸಮಾಜ ಸೇವೆಯಲ್ಲಿ ತೊಡಗಿರುವುದು ಗಮನಾರ್ಹ ಎಂದರು.

    ಸಿಆರ್‌ಪಿ ಸುಷ್ಮಾ ಮಾತನಾಡಿ, ಶಾಲೆಯಲ್ಲಿ ಮಕ್ಕಳಿಗೆ ಓದಿನ ಜತೆಯಲ್ಲಿ ಇಂತಹ ಕಾರ್ಯಕ್ರಮಗಳೂ ಬೇಕು. ಮಕ್ಕಳು ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮುಕ್ತವಾಗಿ ಪಾಲ್ಗೊಳ್ಳಬೇಕು ಎಂದರು.

    ಜಿ.ಎಂ.ಪಿ. ಶಾಲಾ ಮುಖ್ಯ ಶಿಕ್ಷಕಿ ಮಿನ್ನಮ್ಮ ಮಾತನಾಡಿ, ನಮ್ಮ ಶಾಲೆಯಲ್ಲಿ ಇಂತಹ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿರು ವುದು ಸಂತಸದ ವಿಚಾರ. ಅಲ್ಲದೆ ಶಾಲಾ ಬಳಕೆಗೆ ಪ್ರಿಂಟರ್ ಹಾಗೂ ಸ್ಕ್ಯಾನರ್ ನೀಡಿರುವುದು ಪ್ರಶಂಸನೀಯ ಎಂದರು.

    ಒಂಟಿಯಂಗಡಿ ಜಿ.ಎಂ.ಪಿ. ಶಾಲಾ ವಿದ್ಯಾರ್ಥಿಗಳು ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದು, ವಿಜೇತ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು. ಉದ್ಯಮಿ ಪೂಜಾ ರವೀಂದ್ರ, ಜಿಎಂ ಪಿ ಶಾಲೆಗೆ ಪ್ರಿಂಟರ್ ಹಾಗೂ ಸ್ಕ್ಯಾನರ್ ಅನ್ನು ಕೊಡುಗೆಯಾಗಿ ನೀಡಿದರು. ಶಿಕ್ಷಕಿ ಸ್ವಾತಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts