ಅರವತ್ತರ ನಂತರ ನಿಮಗಾಗಿ ಬದುಕಿ

blank

ಹುಬ್ಬಳ್ಳಿ : ಅರವತ್ತು ವಯಸ್ಸಿನ ನಂತರ ಹಿರಿಯ ನಾಗರಿಕರು ತಮಗಾಗಿ ಬದುಕಬೇಕೆಂದು ಧಾರವಾಡ ಐ.ಐ.ಟಿ.ಯ ಭೌತಶಾಸ್ತ್ರದ ಡೀನ್ ಮತ್ತು ಪ್ರ್ರಾಧ್ಯಾಪಕ ಡಾ. ಎಸ್. ಎಂ. ಶಿವಪ್ರಸಾದ ಹೇಳಿದರು.

ಇಲ್ಲಿನ ಲಿಂಗರಾಜ ನಗರದ ಸಮುದಾಯ ಭವನದಲ್ಲಿ ಬುಧವಾರ ಆಯೋಜಿಸಿದ್ದ ಪ್ರೋಬಸ್ ಕ್ಲಬ್​ನ ಮಾಸಿಕ ಸಭೆಯಲ್ಲಿ ಅವರು ಮಾತನಾಡಿದರು.

ಓದುವದು, ಹಾಡುವದು, ಧಾರ್ವಿುಕ ಚಟುವಟಿಕೆಗಳಲ್ಲಿ ಭಾಗವಹಿಸುವದು, ಧ್ಯಾನ, ಯೋಗ, ನಡಿಗೆ, ಸಾಧ್ಯವಾದಷ್ಟು ಸೇವಾ ಕಾರ್ಯಕ್ರಮಗಳನ್ನು ಮಾಡಿಕೊಂಡು ಜೀವಿಸಲು ಹಿರಿಯ ನಾಗರಿಕರು ಪ್ರಯತ್ನಿಸಬೇಕು. ಸ್ನೇಹಿತರೊಂದಿಗೆ ಹೆಚ್ಚು ಸಮಯ ವಿನಯೋಗಿಸಿ, ಉತ್ತಮ ಹವ್ಯಾಸವನ್ನು ಬೆಳಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಅಧ್ಯಕ್ಷ ಡಾ. ಬಸವರಾಜ ಕೋಟಿ ಅಧ್ಯಕ್ಷತೆ ವಹಿಸಿದ್ದರು. ಕ್ಲಬ್​ನ ನಿರ್ದೇಶಕ ಪ್ರೊ. ಕೆ.ಎಸ್. ಕೌಜಲಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್.ಎಸ್. ಕರಡಿ ಪ್ರಾರ್ಥಿಸಿದರು. ಡಾ. ಜಿ. ಬಿ. ಕಲಕೋಟಿ ಪರಿಚಯಿಸಿದರು. ಡಾ. ಎಂ. ಜಿ. ಸಜ್ಜನರ ನಿರೂಪಿಸಿದರು. ಉಮೇಶ ಪಾಟೀಲ ವಂದಿಸಿದರು.

Share This Article

ನಿಮ್ಮ ಸ್ಮಾರ್ಟ್​ಫೋನ್​ ನಿಮ್ಮ ಫಿಟ್​ನೆಸ್​ ಕೋಚ್​… ಆಶ್ಚರ್ಯವಾಯಿತೇ? ಇಲ್ಲಿದೆ ಅಚ್ಚರಿ ಮಾಹಿತಿ… Smartphone

Smartphone : ಸ್ಮಾರ್ಟ್‌ಫೋನ್‌ಗಳ ಮೇಲಿನ ಅವಲಂಬನೆ ದಿನೇ ದಿನೇ ಹೆಚ್ಚಾಗುತ್ತಿದೆ. ಒಂದು ಅಧ್ಯಯನದ ಪ್ರಕಾರ, 2040ರ…

ಈ ದಿನಾಂಕಗಳಂದು ಜನಿಸಿದವರು ತಮ್ಮ ಬುದ್ಧಿವಂತಿಕೆಯಿಂದಾಗಿ ರಾಯಲ್​ ಲೈಫ್​ ನಡೆಸುತ್ತಾರೆ! Numerology

Numerology : ಜ್ಯೋತಿಷ್ಯದಲ್ಲಿ ಅನೇಕ ಬಗೆಗಳಿರುವುದು ಎಲ್ಲರಿಗೂ ತಿಳಿದಿದೆ. ಅವುಗಳಲ್ಲಿ ಸಂಖ್ಯಾಶಾಸ್ತ್ರ ಮತ್ತು ಹಸ್ತಸಾಮುದ್ರಿಕ ಶಾಸ್ತ್ರವೂ…

ನೀವು ಬೆಳಿಗ್ಗೆ ತಿಂಡಿಯನ್ನು ತಡವಾಗಿ ತಿನ್ನುತ್ತೀರಾ? ಎಚ್ಚರ..ಈ ಕಾಯಿಲೆ ಬರೋದು ಪಕ್ಕಾ… breakfast

breakfast: ಬೆಳಗಿನ ಉಪಾಹಾರವು ದೇಹಕ್ಕೆ ಬಹಳ ಮುಖ್ಯ. ಯಾವುದೇ ಕಾರಣಕ್ಕೂ ಉಪಹಾರವನ್ನು ಬಿಡಬಾರದು. ತಡವಾಗಿ ತಿನ್ನುವುದು…