ಬಾಳೆಹೊನ್ನೂರು: ಪಟ್ಟಣದ ಕಲಾರಂಗ ಕ್ರೀಡಾಂಗಣದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಆರಂಭಗೊಳ್ಳಲಿರುವ ಪಟಾಕಿ ಅಂಗಡಿಗಳ ಸ್ಥಳ ಪರಿಶೀಲನೆ ಗುರುವಾರ ನಡೆಸಲಾಯಿತು. ಎನ್.ಆರ್.ಪುರ ತಹಸೀಲ್ದಾರ್ ತನುಜಾ ಟಿ. ಸವದತ್ತಿ ಸ್ಥಳ ಪರಿಶೀಲನೆ ನಡೆಸಿ ಸರ್ಕಾರ, ಜಿಲ್ಲಾಡಳಿತ ಸೂಚಿಸಿರುವ ಮಾರ್ಗಸೂಚಿಯಂತೆ ಪಟಾಕಿ ಅಂಗಡಿಗಳನ್ನು ತೆರೆಯಬೇಕು. ಸೂಕ್ತ ಸುರಕ್ಷತಾ ಕ್ರಮ ಕೈಗೊಂಡು ಅಂಗಡಿಗಳನ್ನು ನಿರ್ಮಾಣ ಮಾಡಬೇಕು ಎಂದರು. ಪಿಎಸ್ಐ ವಿ.ಟಿ.ದಿಲೀಪ್ಕುಮಾರ್, ಮೆಸ್ಕಾಂ ಜೆಇ ರಾಜಪ್ಪ, ಬಿ.ಕಣಬೂರು ಗ್ರಾಪಂ ಪಿಡಿಒ ಕಾಶಪ್ಪ, ಗ್ರಾಮ ಲೆಕ್ಕಾಧಿಕಾರಿ ಸಮೀಕ್ಷಾ ಇತರರಿದ್ದರು.