ಬೆಂಗಳೂರು: ರಾಜ್ಯದಲ್ಲಿ ಮಿತಿಮೀರಿರುವ ಕರೊನಾ ಸೋಂಕಿನ ಪ್ರಮಾಣ ನಿಯಂತ್ರಣಕ್ಕೆ ತರುವ ಸಲುವಾಗಿ ಈಗಾಗಲೇ ವಿಧಿಸಲಾಗಿರುವ ಲಾಕ್ಡೌನ್ ಇನ್ನೆರಡು ದಿನಗಳಲ್ಲಿ ಮುಗಿಯಲಿದೆ. ಈ ನಡುವೆ ಇನ್ನೂ 14 ದಿನಗಳ ಕಾಲ ಲಾಕ್ಡೌನ್ ಮುಂದುವರಿಸಲಾಗಿದೆ. ಅಂದರೆ ಜೂ. 7ರ ಬೆಳಗ್ಗೆ 6 ಗಂಟೆಯವರೆಗೂ ರಾಜ್ಯದಲ್ಲಿ ಲಾಕ್ಡೌನ್ ಇರಲಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಈಗಾಗಲೇ ಇರುವ ಎಲ್ಲ ನಿರ್ಬಂಧ-ನಿಯಮಗಳೂ ಯಥಾಪ್ರಕಾರ ಮುಂದುವರಿಯಲಿವೆ. ಆದರೆ ಅವುಗಳನ್ನು ಹಿಂದಿನಕ್ಕಿಂತಲೂ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಈ ಹಿಂದೆ ವಿಧಿಸಲಾಗಿದ್ದ ಲಾಕ್ಡೌನ್ ಮೇ 24ಕ್ಕೆ ಮುಗಿಯಲಿದ್ದು, ಈಗ ಘೋಷಿಸಲಾಗಿರುವ ಲಾಕ್ಡೌನ್ ಮೇ 24ರಿಂದ ಜಾರಿಗೆ ಬರಲಿದ್ದು, ಜೂ. 7ರ ಬೆಳಗ್ಗೆ 6ರ ವರೆಗೂ ಅನ್ವಯಿಸಲಿದೆ. ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಈ ಕಠಿಣ ಕ್ರಮಜರುಗಿಸಲಾಗಿದ್ದು, ಜನತೆ ಈ ಹಿಂದಿನಂತೆಯೇ ಸಹಕರಿಸಬೇಕು ಹಾಗೂ ಎಲ್ಲ ನಿಯಮಗಳನ್ನು ಚಾಚೂತಪ್ಪದೆ ಪಾಲಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮನವಿ ಮಾಡಿಕೊಂಡಿದ್ದಾರೆ.
ಈ ಐದಾರು ಹಳ್ಳಿಗಳ ಜನರು ಕರೊನಾ ಲಸಿಕೆ ತೆಗೆದುಕೊಳ್ಳಲಿಕ್ಕೇ ಹೆದರುತ್ತಿದ್ದಾರೆ!; ಇವರು ಹೇಳುತ್ತಿರುವ ಕಾರಣವೇ ಭಯಾನಕ!
ಕೋವಿಡ್ನಿಂದ ಗುಣವಾದ ಮೇಲೆ ಕಾಡುತ್ತದೆಯಂತೆ ನಿತ್ರಾಣ!; ಆರು ತಿಂಗಳಾದರೂ ಸುಸ್ತೋ ಸುಸ್ತು!