More

    ಲಾಕ್​ಡೌನ್​ ವಿಸ್ತರಣೆಯ ಪ್ರಧಾನಿ ನರೇಂದ್ರ ಮೋದಿ ನಿರ್ಧಾರವನ್ನು ಸಮರ್ಥಿಸಿದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್​

    ನವದೆಹಲಿ: ದೇಶಾದ್ಯಂತ ಕರೊನಾ ಸೋಂಕಿತರ ಸಂಖ್ಯೆ ದಿನೇದಿನೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇನ್ನಷ್ಟು ಕಾಲ ಲಾಕ್​ಡೌನ್​ ವಿಸ್ತರಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

    ಪ್ರಧಾನಿ ಮೋದಿ ಅವರ ಈ ನಿರ್ಧಾರವನ್ನು ಸಮರ್ಥಿಸಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್​ ಟ್ವೀಟ್​ ಮಾಡಿದ್ದಾರೆ. ತನ್ಮೂಲಕ ದೇಶಾದ್ಯಂತ ಇನ್ನಷ್ಟು ಕಾಲ ಲಾಕ್​ಡೌನ್​ ಮುಂದುವರಿಯುವುದು ನಿಶ್ಚಿತವಾಗಿದೆ.

    ಎಲ್ಲ ರಾಜ್ಯಗಳ ಸಿಎಂಗಳ ಜತೆ ಪ್ರಧಾನಿ ಮೋದಿ ಶನಿವಾರ ಬೆಳಗ್ಗೆ ವಿಡಿಯೋ ಕಾನ್ಫರೆನ್ಸ್​ ನಡೆಸಿ, ಲಾಕ್​ಡೌನ್​ ಮುಂದುವರಿಸುವ ಕುರಿತು ಚರ್ಚಿಸಿದ್ದರು. ಈ ಸಂವಾದದಲ್ಲಿ ಬಹುತೇಕ ಸಿಎಂಗಳು ಲಾಕ್​ಡೌನ್​ ಮುಂದುವರಿಸುವ ಬಗ್ಗೆ ಒಲವು ತೋರಿದ್ದರು. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

    ವಿಡಿಯೋ ಕಾನ್ಫರೆನ್ಸ್​​ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ನೀಡಿದ ಸಲಹೆ ಇದು….

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts