More

    ಡಿಸೆಂಬರ್ 9 ರಂದು ರಾಷ್ಟ್ರೀಯ ಲೋಕ ಅದಾಲತ್

    ಗದಗ: ಜಿಲ್ಲೆಯಲ್ಲಿ  ಡಿಸೆಂಬರ್ 9 ರಂದು   ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗುತ್ತಿದ್ದು ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ  ಪ್ರಕರಣಗಳನ್ನು  ತ್ವರಿತವಾಗಿ  ಇತ್ಯರ್ಥಪಡಿಸಲು  ಇದೊಂದು ಸುವರ್ಣಾವಕಾಶವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಅವರು ತಿಳಿಸಿದರು.

    ಜಿಲ್ಲಾ ನ್ಯಾಯಾಲಯದ ವಿಡಿಯೋ ಕಾನ್ಪರನ್ಸ ಹಾಲ್‍ನಲ್ಲಿ ಶನಿವಾರದಂದು  ಜರುಗಿದ  ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಲೋಕ ಅದಾಲತ್‍ನ ರಾಜೀ ಸಂಧಾನದಲ್ಲಿ ಪಾಲ್ಗೊಂಡು ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೆÇೀಲಾಗುವುದನ್ನು ತಪ್ಪಿಸಬಹುದಾಗಿದೆ. ರಾಜಿ ಸಂಧಾನದಲ್ಲಿ ಪ್ರಕರಣ ಇತ್ಯರ್ಥವಾದರೆ ನ್ಯಾಯಾಲಯಕ್ಕೆ ತುಂಬಿದ ಶುಲ್ಕವನ್ನು ಸಂಪೂರ್ಣ ಮರುಪಾವತಿ ಮಾಡಲಾಗುವುದು.  ಪ್ರಕರಣ ರಾಜೀ ಆದಲ್ಲಿ ಉಭಯ ಪಕ್ಷಗಾರರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ ಇಲ್ಲಿಗೆ ಪ್ರಕರಣ ಮುಕ್ತಾಯಗೊಂಡು ತಮ್ಮ ಮೊದಲಿನ ಬಾಂದsವ್ಯ ಉಳಿಸಿಕೊಳ್ಳಲು ಸಹಾಯಕವಾಗುತ್ತದೆ ಎಂದರು.  

    ಗದಗ ಜಿಲ್ಲೆಯಲ್ಲಿ ರಾಜೀ ಸಂಧಾನಕ್ಕಾಗಿ ಪ್ರತಿಯೊಂದು ನ್ಯಾಯಾಲಯಕ್ಕೆ ಒಂದು ಬೆಂಚಿನಂತೆ ಒಟ್ಟು 15 ಬೆಂಚಗಳನ್ನು ರಚಿಸಿದ್ದು ಗದಗ ಜಿಲ್ಲೆಯಲ್ಲಿ ಒಟ್ಟು 19411 ವಿವಿಧ ಚಾಲ್ತಿಪ್ರಕರಣಗಳಿದ್ದು ಅದರಲ್ಲಿ ಈಗಾಗಲೇ ರಾಜೀ ಆಗಬಹುದಾದ 5456 ಪ್ರಕರಣಗಳನ್ನು ಗುರುತಿಸಲಾಗಿದೆ.  ಇದರಲ್ಲಿ ಸಿವಿಲ್ ದಾವೆಗಳಾದ  ಜಮೀನುಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು ಮನೆ ಹಾಗೂ ನಿವೇಶನಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು, ¨Àsೂಸ್ವಾಧೀನ ಪ್ರಕರಣಗಳು, ಬ್ಯಾಂಕ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಮರಳು ಕಳ್ಳ ಸಾಗಾಣಿಕೆÉ ಪ್ರಕರಣಗಳು, ಚೆಕ್‍ಬೌನ್ಸ್ ಪ್ರಕರಣಗಳು, ಮೋಟರ್ ವಾಹನ ಅಪಘಾತ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಹಾಗೂ ರಾಜೀ ಆಗಲು ಅರ್ಹವಿರುವ ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ರಾಜೀಗಾಗಿ ಗುರುತಿಸಲಾಗಿದೆ.

    ಪ್ರತಿದಿನ ರಾಜೀಗಾಗಿ ಆಯ್ಕೆ ಮಾಡಿದ ಪ್ರಕರಣಗಳನ್ನು ಸಂಬಂದsಪಟ್ಟ ವಕೀಲರು ಹಾಗೂ ಪಕ್ಷಗಾರರೊಂದಿಗೆ ಮುಂಚಿತವಾಗಿಯೇ ರಾಜೀ ಸಂಧಾನದಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿ ಅವರ ಮನ ಒಲಿಸಿ ರಾಜೀ ಸಂಧಾನ ಮಾಡಿಕೊಳ್ಳಲು ತಿಳಿಯಪಡಿಸಲಾಗುವುದು, ಈಗಾಗಲೇ ಸಂಬಂಧಪಟ್ಟ ಇಲಾಖೆಯ ಹಾಗೂ ನಿಗಮ ಮಂಡಳಿಗಳ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ಜರುಗಿಸಿ ಹೆಚ್ಚಿನ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ.  ಪ್ರಕರಣಗಳಿಗೆ ಸಂಬಂದsಪಟ್ಟ ವಕೀಲರು, ಕಕ್ಷಿದಾರರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಇಲಾಖೆಗಳವರು ಜರಗುವ ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಪಾಲ್ಗೊಂಡು ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನ ಮೂಲಕ ಪರಿಹರಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ ಎಂದರು.

    ಸಪ್ಟೆಂಬರ್-2023ರ ಮಾಹೆಯಲ್ಲಿ ಜರುಗಿದ ಲೋಕ ಅದಾಲತ್‍ನಲ್ಲಿ 2067 ಚಾಲ್ತಿ ಪ್ರಕರಣಗಳನ್ನು, 4710 ವ್ಯಾಜ್ಯಪೂರ್ವ ಪ್ರಕರಣಗಳನ್ನು ಸೇರಿ ಒಟ್ಟು 6777 ಪ್ರಕರಣಗಳ್ನು ರಾಜಿ ಮೂಲಕ ಇತ್ಯರ್ಥಪಡಿಸಿದೆ. ಇದರಲ್ಲಿ ವಿಶೇಷವಾಗಿ 10 ಕೌಟುಂಬಿಕ ಪ್ರಕರಣಗಳನ್ನು ಪುನಃ ಒಂದುಗೂಡಿಸಲಾಗಿದೆ  ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ  ಬಸವರಾಜ ಅವರು ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಗುರುಪ್ರಸಾದ ಉಪಸ್ಥಿತರಿದ್ದರು.  

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts