ಕೆವಿಜಿ ಬ್ಯಾಂಕ್ ಕಳ್ಳತನಕ್ಕೆ ಯತ್ನ

blank

ಲೋಕಾಪುರ: ಸಮೀಪದ ಮುದ್ದಾಪುರ ಗ್ರಾಮದಲ್ಲಿನ ಕರ್ನಾಟಕ ವಿಕಾಸ ಗ್ರಾಮೀಣ (ಕೆವಿಜಿ) ಬ್ಯಾಂಕ್‌ಗೆ ಸೋಮವಾರ ರಾತ್ರಿ 2 ಗಂಟೆ ವೇಳೆ ನುಗ್ಗಿದ ಕಳ್ಳರು ಕಳ್ಳತನ ಮಾಡಲು ಯತ್ನಿಸಿದ್ದಾರೆ.

ಮೊದಲು ಷಟರ್ ಮತ್ತು ಬಾಗಿಲಿಗೆ ಹಾಕಿದ್ದ ಎರಡೂ ಬೀಗಗಳನ್ನು ಒಡೆದು ಕಳ್ಳರು ಒಳಗೆ ಪ್ರವೇಶಿಸಿದ್ದು ಸಿಸಿ ಟಿವಿ ಕ್ಯಾಮರಾಗಳಲ್ಲಿ ಸೆರೆಯಾಗಿದೆ. ಭದ್ರತಾ ಕೊಠಡಿಯ ಲಾಕರ್‌ನಲ್ಲಿದ್ದ ಹಣ ದೋಚಲು ಪ್ರಯತ್ನಿಸಿದ್ದಾರೆ.

ಬ್ಯಾಂಕ್‌ನ ಸೈರನ್ ವೈಯರ್ ಕಟ್ಟ ಮಾಡಲಾಗಿದೆ. ಶನಿವಾರ, ಭಾನುವಾರ, ಸೋಮವಾರ ಮೂರು ದಿನ ಬ್ಯಾಂಕ್ ರಜೆ ಇರುವುದರಿಂದ ಬ್ಯಾಂಕ್ ಸಿಬ್ಬಂದಿ ಮಂಗಳವಾರ ಬೆಳಗ್ಗೆ ಕೆಲಸಕ್ಕೆ ಬಂದಾಗ ಕಳ್ಳತನ ನಡೆದಿದೆ ಎಂದು ತಿಳಿದು ಬಂದಿದೆ. ಆದರೆ ಕಾಗದ, ಬಂಗಾರ, ಹಣ ಎಲ್ಲವೂ ಸುರಕ್ಷಿತವಾಗಿದೆ ಎಂದು ಕೆವಿಜಿ ಬ್ಯಾಂಕ್ ಶಾಖಾ ವ್ಯವಸ್ಥಾಪಕ ಐ.ಪಿ. ಮಹಾಬಳಶೆಟ್ಟಿ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಶ್ವಾನದಳದ ಸಿಬ್ಬಂದಿ ಕೆ.ಎಸ್. ಗೌಡರ ಹಾಗೂ ಬೆರಳಚ್ಚು ವಿಭಾಗದ ಸಿಬ್ಬಂದಿ ತಿಪ್ಪಣ್ಣ ಮಾದರ, ಪಿಎಸ್‌ಐ ಶಿವಶಂಕರ ಮುಕರಿ ಭೇಟಿ ನೀಡಿ ಶೋಧ ಕಾರ್ಯ ನಡೆಸಿದ್ದಾರೆ. ಲೋಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ 15 ವರ್ಷಗಳ ಹಿಂದೆ ಇದೇ ಬ್ಯಾಂಕ್ ಕಳ್ಳತನವಾಗಿತ್ತು. ಹಳೇ ಕಟ್ಟಡ ಇರುವುದರಿಂದ ಬ್ಯಾಂಕ್ ಶಾಖೆಯನ್ನು ಸುಸಜ್ಜಿತ ನೂತನ ಕಟ್ಟಡಕ್ಕೆ ಸ್ಥಳಾಂತರಿಸಬೇಕೆಂದು ಬ್ಯಾಂಕ್ ವ್ಯವಸ್ಥಾಪಕರಿಗೆ ಗ್ರಾಹಕರು ಆಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ.



ಕೆವಿಜಿ ಬ್ಯಾಂಕ್ ಕಳ್ಳತನಕ್ಕೆ ಯತ್ನ



Share This Article

ಮಳೆಗಾಲದಲ್ಲಿ ಈ ಪದಾರ್ಥಗಳನ್ನು ನಿಮ್ಮ ಆಹಾರದಲ್ಲಿ ಬಳಸಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸಿಕೊಳ್ಳಿ! rainy season

rainy season: ಮಳೆಗಾಲದಲ್ಲಿ ಬ್ಯಾಕ್ಟೀರಿಯಾ, ವೈರಸ್‌ಗಳು ಅಥವಾ ಇತರ ಶಿಲೀಂಧ್ರ ಸೋಂಕುಗಳು ಸುಲಭವಾಗಿ ಹರಡುತ್ತವೆ. ಮಳೆಗಾಲದಲ್ಲಿ…

ಸಣ್ಣ ತೂಕ ಎತ್ತಿದರೂ ಸುಸ್ತಾಗುತ್ತಾ? ಹಾಗಾದರೆ ಈ ಆಹಾರಗಳಿಂದ ನರ ದೌರ್ಬಲ್ಯ ನಿವಾರಿಸಿ… Health Tips

Health Tips : ದೇಹವು ಸರಿಯಾದ ಪೋಷಕಾಂಶಗಳನ್ನು ಪಡೆಯದಿದ್ದರೆ, ಅನೇಕ ರೋಗಗಳಿಗೆ ತುತ್ತಾಗುತ್ತದೆ. ನಿಮ್ಮಲ್ಲಿರುವ ಕೆಟ್ಟ…