ಬೆಂಗಳೂರು: ವಶಪಡಿಸಿಕೊಂಡಿದ್ದ ದ್ವಿಚಕ್ರ ವಾಹನ ಬಿಡುಗಡೆ ಮಾಡಲು ಹಣಕ್ಕೆ ಬೇಡಿಕೆ ಇಟ್ಟಿದ್ದ ಮಧ್ಯವರ್ತಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಸೈಯಾದ್ ಇಮ್ರಾನ್ ಬಂಧಿಸಲಾಗಿದ್ದು, ಹಣಕ್ಕೆ ಬೇಡಿಕೆ ಇಟ್ಟಿದ್ದ ಹೆಡ್ ಕಾನ್ಸ್ಟೆಬಲ್ ಶಕೀಲ್ ಅಹಮ್ಮದ್ಗಾಗಿ ಶೋಧ ನಡೆಸಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಹಮ್ಮದ್ ಫಿರೋಜ್ ಎನ್ನುವವರು ನೀಡಿದ ದೂರಿನನ್ವಯ ಟ್ರಾಪ್ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಮಧ್ಯವರ್ತಿ ೫೦ ಸಾವಿರ ರೂ. ಹಣ ಪಡೆಯುವಾಗ ಸಾಕ್ಷಿ ಸಮೇತ ಬಂಧಿಸಿದ್ದಾರೆ. ಶಕೀಲ್ ಅಹಮ್ಮದ್ ೧ ಲಕ್ಷ ರೂ. ಬೇಡಿಕೆ ಇಟ್ಟು ಮಧ್ಯವರ್ತಿಯ ಮೂಲಕ ೫೦ ಸಾವಿರ ಹಣ ಪಡೆಯುತ್ತಿದ್ದ ಈ ವೇಳೆ ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಿ ೫೦ ಸಾವಿರ ಜಪ್ತಿ ಮಾಡಲಾಗಿದೆ. ತಲೆಮರೆಸಿಕೊಂಡಿರುವ ಶಕೀಲ್ ಅಹಮದ್ ಗಾಗಿ ಶೋಧ ನಡೆಸಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.