Muda scam: ಮುಡಾ ಹಗರಣದಲ್ಲಿ ನಡೆಸಲಾಗಿರುವ ಲೋಕಾಯುಕ್ತ ತನಿಖೆಯು ಸಿದ್ದರಾಮಯ್ಯರಿಂದ, ಸಿದ್ದರಾಮಯ್ಯರಿಗಾಗಿ, ಸಿದ್ದರಾಮಯ್ಯರಿಗೋಸ್ಕರ ನಡೆಸಿದ ತನಿಖೆಯಾಗಿದ್ದು, ಇದರಲ್ಲಿ ನ್ಯಾಯ ಸಿಕ್ಕುತ್ತದೆ ಎನ್ನುವ ಭರವಸೆ ಯಾರಿಗೂ ಇರಲಿಲ್ಲ ಎಂದು ಆರ್. ಅಶೋಕ ಲೇವಡಿ ಮಾಡಿದ್ದಾರೆ.
ಇದನ್ನೂ ಓದಿ:ಗರ್ಭನಿರೋಧಕ ಮಾತ್ರೆಗಳಿಂದ ಅಪಾಯ ತಪ್ಪಿದ್ದಲ್ಲ; ಇಲ್ಲಿದೆ ಸಂಶೋಧನೆಯಲ್ಲಿ ಬಹಿರಂಗವಾದ ಅಸಲಿ ಸಂಗತಿ |Health Tips
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಅಶೋಕ, ” ಮುಡಾ ಹಗರಣದಲ್ಲಿ ತನಿಖೆಗೆ ಮೊದಲೇ ಮುಖ್ಯಮಂತ್ರಿಗಳಾದಿಯಾಗಿ, ಸಚಿವರು, ಶಾಸಕರು ಆರೋಪಿ ಸಿದ್ದರಾಮಯ್ಯ ಹಾಗು ಅವರ ಧರ್ಮ ಪತ್ನಿ ಅವರಿಗೆ ಕ್ಲೀನ್ ಚಿಟ್ ನೀಡಿದ್ದರು. ಇದನ್ನೇ ಲೋಕಾಯುಕ್ತ ಪೊಲೀಸರೂ ಸ್ವಲ್ಪ ತಡವಾಗಿ ‘ಬಿ ರಿಪೋರ್ಟ್’ ರೂಪದಲ್ಲಿ ನೀಡಿದ್ದಾರೆ. ಇದರಲ್ಲಿ ಆಶ್ಚರ್ಯಪಡುವಂತದ್ದು ಏನಿಲ್ಲ ಎಂದಿದ್ದಾರೆ.
ಇದನ್ನೂ ಓದಿ:ಗರ್ಭನಿರೋಧಕ ಮಾತ್ರೆಗಳಿಂದ ಅಪಾಯ ತಪ್ಪಿದ್ದಲ್ಲ; ಇಲ್ಲಿದೆ ಸಂಶೋಧನೆಯಲ್ಲಿ ಬಹಿರಂಗವಾದ ಅಸಲಿ ಸಂಗತಿ |Health Tips
ಒಂದೇ ಒಂದು ದಿನ ನೆಪಮಾತ್ರಕ್ಕೆ ಆರೋಪಿ ಸಿಎಂ ಸಿದ್ದರಾಮಯ್ಯ ಹಾಗು ಅವರ ಪತ್ನಿ ಅವರನ್ನು ವಿಚಾರಣೆ ನಡೆಸಿ ಕ್ಲೀನ್ ಚಿಟ್ ನೀಡಿರಿವುದು ರಾಜ್ಯ ಕಂಡ ‘ಐತಿಹಾಸಿಕ ದುರಂತ’. ಭ್ರಷ್ಟ ಕಾಂಗ್ರೆಸ್ ಸರ್ಕಾರದಲ್ಲಿ ‘ನ್ಯಾಯ’ ಮಣ್ಣುಪಾಲಾಗಿದೆ. ಸಮರ್ಪಕ ತನಿಖೆಯನ್ನೇ ನಡೆಸದೆ ಕ್ಲೀನ್ ಚಿಟ್ ನೀಡಿ ‘ನ್ಯಾಯದ ಸಮಾಧಿ’ ಮಾಡಿದೆ ಈ ದುಷ್ಟ ಕಾಂಗ್ರೆಸ್ ಸರ್ಕಾರ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ:ರಾಷ್ಟ್ರಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ, ಸಾಹಿತಿ!
ಕೋರ್ಟಿಗೆ ಸಂಪೂರ್ಣ ಸಾಕ್ಷ್ಯ ಒದಗಿಸದೆ ಪ್ರಕರಣವನ್ನ ಮುಚ್ಚಿ ಹಾಕಿ ಸತ್ಯದ ಸಮಾಧಿ ಮಾಡಲು ಹೊರಟಿರುವ ಸಿಎಂ ಸಿದ್ದರಾಮಯ್ಯನವರ ಪ್ರಯತ್ನಕ್ಕೆ ಜಯ ಸಿಗುವುದಿಲ್ಲ. ಇಂದಲ್ಲ ನಾಳೆ, ಉಪ್ಪು ತಿಂದ ಸಿದ್ದರಾಮಯ್ಯನವರು ನೀರು ಕುಡಿಯಲೇಬೇಕು ಎಂದಿದ್ದಾರೆ.
Muda ಹಗರಣ; ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಕ್ಲೀನ್ಚಿಟ್ ನೀಡಿದ ಲೋಕಾಯುಕ್ತ!