ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆ; 3 ಲಕ್ಷ ರೂ. ಲಂಚ ಪಡೆಯುತ್ತಿದ್ದ ಅಧಿಕಾರಿಗಳಿಬ್ಬರು ವಶಕ್ಕೆ

blank

ದಾವಣಗೆರೆ: ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 3 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ದಾವಣಗೆರೆ ನಗರ ಯೋಜನಾ ಪ್ರಾಧಿಕಾರದ ಸಹಾಯಕ ನಿರ್ದೇಶಕ ಮಂಜು ಕೆ.ಆರ್ ಹಾಗೂ ನಗರ ಯೋಜನಾಧಿಕಾರಿ ಭರತ್ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕೊಂಡಜ್ಜಿಯಲ್ಲಿ ಖಾಸಗಿ ಲೇ ಔಟ್ ಮಾಡುತ್ತಿದ್ದ ಶ್ರೀನಿವಾಸ ಅವರಲ್ಲಿ ಪರವಾನಿಗೆ ನೀಡಲು ಮಂಜು ಕೆ ಆರ್, ಭರತ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅಧಿಕಾರಿಗಳಿಬ್ಬರು ಈಗಾಗಲೇ ಮುಂಗಡವಾಗಿ ಒಂದು ಲಕ್ಷ ರೂ. ಪಡೆದಿದ್ದರು. ಉಳಿದ ಎರಡು ಲಕ್ಷ ರೂ. ಲಂಚದ ಹಣವನ್ನು ನಗರ ಯೋಜನಾ ಪ್ರಾಧಿಕಾರ ಕಚೇರಿಯಲ್ಲಿ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ದಾವಣಗೆರೆ ಲೋಕಾಯುಕ್ತ ಎಸ್​​ಪಿ ಎಂ.ಎಸ್. ಕೌಲಾಪುರೆ ನೇತ್ರತ್ವದಲ್ಲಿ, ಇನ್ಸ್​ಪೆಕ್ಟರ್​ಗಳಾದ ಆಂಜನೇಯ ಹಾಗೂ ರಾಷ್ಟ್ರಪತಿ ಅವರು ದಾಳಿ ನಡೆಸಿದ್ದಾರೆ. ಸದ್ಯ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.

Share This Article

ಚಾಣಕ್ಯನ ಪ್ರಕಾರ ನಿಮಗೆ ಈ 4 ಸಂಗತಿ ಗೊತ್ತಿದ್ದರೆ ಯಾರಿಂದಲೂ ನಿಮ್ಮನ್ನು ಸೋಲಿಸಲು ಸಾಧ್ಯವಿಲ್ಲ! Chanakya Niti

Chanakya Niti : ಭಾರತದ ಉತ್ತಮ ವಿದ್ವಾಂಸರಲ್ಲಿ ಚಾಣಕ್ಯರು ಒಬ್ಬರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ…

ಪ್ರತಿದಿನ ಬೆಳಿಗ್ಗೆ ಪಪ್ಪಾಯಿ ತಿಂದರೆ ಏನಾಗುತ್ತದೆ ಗೊತ್ತಾ? ನೀವು ಇದನ್ನು ತಿಳಿದುಕೊಳ್ಳಲೇಬೇಕು..Papaya

Papaya: ಪಪ್ಪಾಯಿ ಹಣ್ಣು ಆರೋಗ್ಯಕ್ಕೆ ಮಾತ್ರವಲ್ಲದೆ ಸೌಂದರ್ಯಕ್ಕೂ ಪ್ರಯೋಜನಕಾರಿ ಎನ್ನುವುದು ನಮಗೆ ಗೊತ್ತಿರುವ ವಿಚಾರವಾಗಿದೆ. ಪಪ್ಪಾಯಿ…

ಈ 3 ರಾಶಿಯವರ ಮಾನಸಿಕ ಶಕ್ತಿಯನ್ನು ಕುಗ್ಗಿಸಲು ಯಾರಿಂದಲೂ ಸಾಧ್ಯವಿಲ್ಲ! ನಿಮ್ಮ ರಾಶಿ ಯಾವುದು? Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯು ಯಾವ ರಾಶಿಚಕ್ರ ಮತ್ತು ನಕ್ಷತ್ರದಲ್ಲಿ…